(www.vknews.in) : ನಗರದ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಸರಕಾರ ಸಮರ್ಪಕ ಅಗತ್ಯ ಸಲಕರಣೆಗಳನ್ನು ನೀಡಿಲ್ಲ. ನಿತ್ಯ ಕಾರ್ಯಕ್ಕೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ ಸಮಸ್ಯೆಗಳಿಗೆ ವೈದ್ಯಕೀಯ ಉಪಚಾರ, ಗ್ರಾಚ್ಯುಟಿ, ಹೆರಿಗೆ ಭತ್ತೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕಾಂಗ್ರೆಸ್ ಮುಖಂಡ ಮಿಥುನ್ ರೈ, ಶಶಿಧರ ಹೆಗ್ಡೆ, ನವೀನ್ ಡಿಸೋಜಾ, ಶ್ಯಾಲೆಟ್ ಪಿಂಟೋ, ಅಬ್ದುಲ್ ರವೂಫ್, ಅಪ್ಪಿ, ಶಾಂತಲಾ ಗಟ್ಟಿ ಮೊದಲಾದವರು ಮುಷ್ಕರದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ)ಯ ಮುಖಂಡ ದೇವದಾಸ್ ಅವರು ಮುಷ್ಕರದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ಬೆಂಬಲ ಸೂಚಿಸಿದರು. ನ್ಯಾಯಕ್ಕಾಗಿನ ಪೌರ ಕಾರ್ಮಿಕರ ಬೇಡಿಕೆಯನ್ನು ಸರಕಾರ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದರು.
ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆಯಡಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಬಹುತೇಕವಾಗಿ ಸ್ವಚ್ಚತಾ ಕಾರ್ಯವನ್ನು ನಿರ್ವಹಿಸುವವರು. ಅವರಿಗೆ ಸೂಕ್ತವಾದ ಆರೋಗ್ಯ ಭದ್ರತೆ, ವೇತನ ಭದ್ರತೆ ಇಲ್ಲವಾಗಿದೆ. ಈ ಗುತ್ತಿಗೆ ಪೌರ ಕಾರ್ಮಿಕರಲ್ಲಿ ಹೆಚ್ಚಿನವರು ಹೊರ ಜಿಲ್ಲೆಯವರಾಗಿದ್ದು, ಅವರು ಇಲ್ಲಿ ಬಾಡಿಗೆ ಮನೆಗಳಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದಾರೆ. ಅವರಿಗೆ ದೊರಕುವ ೧೨ ಸಾವಿರ ರೂ. ವೇತನದಲ್ಲಿ ಬಾಡಿಗೆಗೆ ನಾಲ್ಕೈದು ಸಾವಿರ ವ್ಯಯಿಸಿ ಅವರು ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುವುದಾದರೂ ಹೇಗೆ? ಅದರ ಜತೆಗೆ ಹಲವಾರು ವರ್ಷಗಳಿಂದಲೂ ಪೌರ ಕಾರ್ಮಿಕರಾಗಿ ದುಡಿಯುವರು ಆರೋಗ್ಯ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಅವರಿಗೆ ಸೂಕ್ತವಾದ ಆರೋಗ್ಯ ಭದ್ರತೆ ಇಲ್ಲವಾಗಿದೆ.
ಹೀಗಾಗಿ ನಾವು ನಮ್ಮ ಅಗತ್ಯ ಬೇಡಿಕೆಗಳನ್ನು ಈಡೇರಿಸುವಂತೆ ಸತತವಾಗಿ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಕಳೆದ ಒಂದು ತಿಂಗಳಿನಿಂದ ನಿರ್ದಿಷ್ಟ ಅವಧಿಯೊಳಗೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸುತ್ತಿದ್ದೇವೆ. ಕಳೆದ ನಾಲ್ಕು ದಿನಗಳಿಂದ ಪೌರ ಕಾರ್ಮಿಕರು ತಮ್ಮೆಲ್ಲಾ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದೇವೆ. ನಮಗೆ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ. ನಮಗೆ ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಆದೇಶ ಬೇಕಾಗಿದೆ ಎಂದು ದ.ಕ. ಜಿಲ್ಲಾ ಪೌರ ಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ಪ್ರತಿನಿಧಿಗಳು ಪ್ರತಿಕ್ರಿಯಿಸಿದ್ದಾರೆ.
ಈ ಮದ್ಯೆ ಹಲವಾರು ಕಡೆ ಕಸದ ರಾಶಿ ತೂಂಬಿದ್ದು ರೋಗಬೀತಿ ಎದುರಾಗಿದ್ದರೆ ಹಲವರಿಗೆ ಪೌರ ಕಾರ್ಮಿಕರ ಪವರ್ ಏನೆಂಬುದು ಈಗ ಗೊತ್ತಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.