ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯದಲ್ಲಿ ಪೌರ ಕಾರ್ಮಿಕರು ಚಾಲಕರು, ಸಹಾಯಕರು ನಡೆಸುತ್ತಿರುವ ಮುಷ್ಕರಕ್ಕೆ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ
ಕಾರ್ಮಿಕರು ಕೆಲಸದ ವೇಳೆ ಅಪಾಯಕಾರಿ ತ್ಯಾಜ್ಯಗಳನ್ನು, ಮೊಣಚಾದ ವಸ್ತುಗಳನ್ನು ಸಂಗ್ರಹಿಸುವುದರಿಂದ ಅವರು ಕಣ್ಣಿನ, ಉಸಿರಾಟದ, ಚರ್ಮದ ಸಮಸ್ಯೆಗೆ ತುತ್ತಾಗಿ ಆರೋಗ್ಯಕ್ಕೆ ಹಾನಿಕಾರವಾಗುವ ಸವಾಲುಗಳಿಗೆ ಮೈಯೊಡ್ಡಿ ಕೆಲಸ ನಿರ್ವಹಿಸುತ್ತಿದ್ದಾರೆ ವರ್ಷದ 365 ದಿನಗಳು ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಯಾವುದೇ ಉಪಕರಣ ಇಲ್ಲದೆ ರಾಜ್ಯದ ಜನರ ಆರೋಗ್ಯದ ಹಿತ ದ್ರಷ್ಟಿ ಮತ್ತು ಕರ್ತವ್ಯ ಪ್ರಜ್ಞೆಯಿಂದ ಕೆಲಸ ನಿರ್ವಹಿಸುತ್ತಾ ಇದ್ದಾರೆ
ಪೌರ ಕಾರ್ಮಿಕರು ಸಮಾಜಕ್ಕೆ ನೀಡುವ ಕೊಡುಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರ ಬೇಡಿಕೆಗಳಿಗೆ ಪ್ರಜ್ಞಾಪೂರ್ವಕ ತಕ್ಷಣ ಸ್ಪಂದಿಸಬೇಕು ಮತ್ತು ಅಭಿವೃದ್ಧಿಗೆ ಪೂರಕವಾಗಿರುವ ಪೌರ ಕಾರ್ಮಿಕರ ಶ್ರಮ ಎಂದು ಪರಿಗಣಿಸಿ ಶೀಘ್ರ ಪರಿಹಾರ ಕಂಡುಕೊಳ್ಳಲು SDTU ರಾಜ್ಯಧ್ಯಕ್ಷ ಅಬ್ದುಲ್ ರಹೀಮ್ ಪಟೇಲ್ ಸರ್ಕಾರವನ್ನು ಅಗ್ರಹಿಸುತ್ತಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.