ಬಿ.ಸಿ.ರೋಡ್ (www.vknews.in) : ಕ್ಷುಲ್ಲಕ ವಿಚಾರಕ್ಕೆ ಸಂಭಂದಿಸಿ ಯುವಕನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬಿಸಿ ರೋಡ್ ನಿಂದ ವರದಿಯಾಗಿದೆ. ಕೈಕಂಬ ಸಮೀಪದ ಶಾಂತಿಅಂಗಡಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಆಸಿಫ್ (32) ಕೊಲೆಯಾದ ಯುವಕ. ತಾಲೂಕಿನ ಮಾರಿಪಳ್ಳ ನಿವಾಸಿಗಳಾದ ನೌಫಲ್ ಮತ್ತು ನೌಶೀರ್ ಕೊಲೆ ಆರೋಪಿಗಳು ಎಂದು ದೂರಲಾಗಿದೆ.
ಬಸ್ ಡಿಪ್ಪೋದ ಬಳಿ ಇರುವ ಹೊಟೇಲ್ ಒಂದರ ಮುಂಭಾಗ ಆಸಿಫ್ ಬೈಕ್ ನಲ್ಲಿ ಹಾರ್ನ್ ಮಾಡಿರುವುದಕ್ಕೆ ನೌಫಲ್ ಮತ್ತು ನೌಶೀರ್ ಆಕ್ಷೇಪ ವ್ಯಕ್ತಪಡಿಸಿದ್ದು ಈ ವೇಳೆ ಮೂವರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಬಳಿಕ ಆಸಿಫ್ ತನ್ನ ಸ್ನೇಹಿತರನ್ನು ಸ್ಥಳಕ್ಕೆ ಕರೆದಿದ್ದು ಎರಡು ಕಡೆಯವರ ನಡುವೆ ಮತ್ತೆ ವಾಗ್ವಾದ, ಗಲಾಟೆ ನಡೆದಿದೆ ಎನ್ನಲಾಗಿದ್ದು ಕೊನೆಗೆ ನೌಫಲ್ ಮತ್ತು ನೌಶೀರ್ ಸೇರಿ ಆಸಿಫ್ ಗೆ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡ ಆಸಿಫ್ ನನ್ನು ಆಸ್ಪತ್ರೆಗೆ ಸಾಗಿಸಿದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಮಧ್ಯೆ ನೌಫಲ್ ಮತ್ತು ನೌಶೀರ್ ಆಸ್ಪತ್ರೆಗೆ ದಾಖಲಾಗಿದ್ದು ಆಸಿಫ್ ನ ತಂಡ ಹಲ್ಲೆ ನಡೆಸಿದೆ ಎಂದು ದೂರಿದ್ದಾರೆ. ಮೃತ ಆಸಿಫ್ ವಿವಾಹಿತನಾಗಿದ್ದು, ಬಂದರು ದಕ್ಕೆಯಲ್ಲಿ ದುಡಿಯುತ್ತಿದ್ದರು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.