ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ವ್ಯಕ್ತಿಯೊಬ್ಬ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮಂಗಳವಾರ ಮಧ್ಯಾಹ್ನದ ವೇಳೆಗೆ ಹುಬ್ಬಳ್ಳಿಯ ಹೋಟೆಲ್ ಮುಂಭಾಗದಲ್ಲಿ ಡಾ. ಚಂದ್ರಶೇಖರ್ ಗುರೂಜಿ ಮೇಲೆ ಅನಾಮಿಕ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ. ಡಾ. ಚಂದ್ರಶೇಖರ್ ಗುರೂಜಿಅವರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.