ದಾವಣಗೆರೆ(ವಿಶ್ವಕನ್ನಡಿಗ ನ್ಯೂಸ್): ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನವಿಲೇಹಾಳ್ ಗ್ರಾಮದ ಡಾ. ಷಕೀಬ್ ಎಸ್ ಕಣದ್ಮನೆ ಅವರ ಕನ್ನಡ ನಾಡು-ನುಡಿ, ನೆಲ-ಜಲ, ಸಮಾಜ ಸೇವೆ, ಸಂಶೋಧನೆ, ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಮುಕ್ತ ಕಂಠದಿಂದ ಶ್ಲಾಘಿಸುತ್ತಾ ಇವರಿಗೆ ಕರುನಾಡ ಸೇವಾ ಟ್ರಸ್ಟ್ (ರಿ) ಮಂಡ್ಯ, ಇವರು ಕೊಡಮಾಡುವ “ರಾಜ್ಯಮಟ್ಟದ ಪ್ರಜಾಭೂಷಣ ಪ್ರಶಸ್ತಿ-೨೦೨೨”ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜು. ೦೩ ರಂದು ಮೈಸೂರಿನ ರೋಟರಿ ಸಂಭಾಂಗಣದಲ್ಲಿ ಅಯೋಜಿಸಲಾಗಿದ್ದ “ಸಾಧಕರ ಸಮಾಗಮ” ಸಮಾರಂಭದಲ್ಲಿ ಗಣ್ಯ ಮಹನೀಯರ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಎಂದು ಕರುನಾಡ ಸೇವಾ ಟ್ರಸ್ಟ್ (ರಿ) ಮಂಡ್ಯ, ಅಧ್ಯಕ್ಷರಾದ ಅಭಿನಂದನ್ ಎಂ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.