ಶ್ರೀನಿವಾಸಪುರ ( ವಿಶ್ವಕನ್ನಡಿಗ ನ್ಯೂಸ್ ) ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ ಹಾಗು ಮಾನಸಿಕವಾಗಿ ಸದೃಢವಾಗುತ್ತಾರೆಂದು ಬಿಇಒ ಉಮಾದೇವಿ ತಿಳಿಸಿದರು.
ತಾಲ್ಲೂಕಿನ ಮುತ್ತಕಪಲ್ಲಿ ಪ್ರೌಢಶಾಲಾವರಣದಲ್ಲಿ ಮಂಗಳ ವಾರ ನಡೆದ ಗ್ರಾಮಪಂಚಾಯತಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡದಿರು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಭಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೊಳ್ಳುವು ದರಿಂದ ವಿದ್ಯಾರ್ಥಿಗಳಿಗೆ ಓದುವು ದಕ್ಕೆ ಮನಸ್ಸು ಉಲ್ಲಾಸವಾಗಿ ಏಕಾಗ್ರತೆಯು ಬೆಳೆಯುತ್ತದೆ ಎಂದು ತಿಳಿಸಿದರು.
ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್ , ಉಪ ನ್ಯಾಸಕ ಶೇಷಗಿರಿ , ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮಚೆನ್ನಪ್ಪ , ಸದಸ್ಯರಾದ ಎಂ.ಕೆ.ಸುರೇಶ್ಕುಮಾರ್ , ನಸೀ ಮನ್ನಿಸಾ , ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ , ನಿವೃತ್ತ ಪ್ರಾಂಶು ಪಾಲ ಎಂ.ವಿ. ಬಷೀರ್ , ಪ್ರೌಡ ಶಾಲೆ ಮುಖ್ಯ ಶಿಕ್ಷಕ ಲಕ್ಷ್ಮಯ್ಯ ಇತರರು ಇದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.