ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಲಯನ್ಸ್ ಜಿಲ್ಲೆ 317-C, ಪ್ರಾಂತ್ಯ VII ಹಾಗೂ ವಲಯ II ರ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 4 ನೇ ಅಂತರಾಷ್ಟ್ರೀಯ ಪದಪ್ರದಾನ ಸಮಾರಂಭ ಉದ್ಯಾವರದ ಸೈಂಟ್ ಫ್ರಾನ್ಸಿಸ್ ಝೇವಿಯರ್ ಚರ್ಚ್ ನ ಝೇವಿಯರ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ದಲ್ಲಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿದ ಜಿಲ್ಲಾ 317 C ಯ ಪ್ರಥಮ ಜಿಲ್ಲಾ ಉಪ ಗವರ್ನರ್ ಲ. ಡಾ.ನೇರಿ ಕರ್ನೆಲಿಯೋ ಎಂಜೆಎಫ್ ಅವರು ಮಾತನಾಡಿ, ನಮ್ಮಲ್ಲಿ ಭರವಸೆ, ಧನಾತ್ಮಕ ಚಿಂತನೆ, ಆತ್ಮ ಗೌರವ, ಸ್ವಾಭಿಮಾನ ಇದ್ದರೆ ನಾವು ಖಂಡಿತವಾಗಿಯೂ ಸಮಾಜದಲ್ಲಿ ಸಾಧನೆ ಮಾಡುತ್ತೇವೆ ಉತ್ತಮ ಯಶಸ್ಸು ಗಳಿಸುತ್ತೇವೆ ಎಂದರು.
ನಿಕಟಪೂರ್ವ ಅಧ್ಯಕ್ಷ ಲ. ಗೋಡ್ಫ್ರಿ ಡಿಸೋಜ, ಕಾರ್ಯದರ್ಶಿ ಲ. ಮೈಕಲ್ ಡಿಸೋಜ ಮತ್ತು ಕೋಶಾಧಿಕಾರಿ ಲ.ರೋಯ್ಸ್ ಫೆರ್ನಾಂಡಿಸ್ ಅವರಿಗೆ ಈ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ಸಮ್ಮಾನಿಸಲಾಯಿತು. ನೂತನ ಅಧ್ಯಕ್ಷ ಲ. ಅನಿಲ್ ಲೋಬೊ ಪ್ರಸ್ತುತ ವರ್ಷದಲ್ಲಿ ಸರ್ವರ ಸಹಕಾರ ಕೋರಿದರು.
ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿ ಡಾ. ಸಂದೀಪ್ ಕುಮಾರ್ ಶೆಟ್ಟಿ ಸಹಿತ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚ್ ನ ಧರ್ಮಗುರು ಅ.ವಂ.ಫಾ. ಸ್ಟ್ಯಾನಿ ಬಿ ಲೋಬೊ, ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಹಾಗೂ ಪ್ರಾಂತೀಯ 7ರ ಅಧ್ಯಕ್ಷೆ ಲ. ವಿಜಯ ಗೋಪಾಲ್ ಎಂಜೆಎಫ್, ವಲಯ 2ರ ಅಧ್ಯಕ್ಷ ಲ. ಜೋನ್ ಫೆರ್ನಾಂಡಿಸ್ ಎಂಜೆಎಫ್, ಕೋಶಾಧಿಕಾರಿ ಲ. ರೋಶನ್ ಕ್ರಾಸ್ತಾ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಾರ್ಷಿಕ ವಿವಿಧ ಚಟುವಟಿಕೆಗಳ ಪ್ರಯುಕ್ತ ಹಮ್ಮಿಕೊಂಡಿದ್ದ ಅದ್ರಷ್ಟ ಚೀಟಿಯ ಡ್ರಾ ನಡೆಯಿತು.
ನಿಕಟಪೂರ್ವ ಅಧ್ಯಕ್ಷ ಲ. ಗೊಡ್ಫ್ರಿ ಡಿಸೋಜ ಎಂಜೆಎಫ್ ಸ್ವಾಗತಿಸಿದರೆ, ಕಾರ್ಯದರ್ಶಿ ಲ. ಸ್ಟೀವನ್ ಕುಲಾಸೋ ಧನ್ಯವಾದ ಸಮರ್ಪಿಸಿದರು. ಲ. ವಿಲ್ಫ್ರೆಡ್ ಡಿಸೋಜ ಮತ್ತು ಲ. ಪ್ರವೀಣ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.