ನಾಪತ್ತೆಯಾಗಿರುವ ಯುವಕರಿಗಾಗಿ ಶೋಧ..
ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಕಾರು ನಿಯಂತ್ರಣ ತಪ್ಪಿ ಹರಿಯುತ್ತಿದ್ದ ನದಿಗೆ ಬಿದ್ದ ಪರಿಣಾಮ ಕಾಸರಗೋಡು ಮಂಜೇಶ್ವರಂ ನಿವಾಸಿ ಸೇರಿದಂತೆ ಇಬ್ಬರು ನಾಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಕುಂಡಡ್ಕ ಧನುಷ್ (26) ಹಾಗೂ ಅವರ ಸಂಬಂಧಿ ಕಾಸರಗೋಡು ಮಂಜೇಶ್ವರಂ ನಿವಾಸಿ ಧನುಷ್ (21) ನಾಪತ್ತೆಯಾಗಿದ್ದಾರೆ. ಕಾರನ್ನು ನದಿಯಿಂದ ತೆಗೆಯಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿನ್ನೆ ತಡರಾತ್ರಿ ಪುತ್ತೂರು-ಸುಬ್ರಮಣ್ಯ ರಸ್ತೆಯ ಬೈತಡ್ಕ ಎಂಬಲ್ಲಿ ಕಾರು ಅಪಘಾತಕ್ಕೀಡಾದ ದೃಶ್ಯ ಸಮೀಪದ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದ ಪೊಲೀಸರು ನಿನ್ನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವ ಯುವಕರಿಗಾಗಿ ಶೋಧ ಮುಂದುವರಿದಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿಷಿಕೇಶ್ ಭಗವಾನ್ ಸೋನವನ್ ಅವರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆಗೆ ಆದೇಶಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.