ದೋಹಾ(ವಿಶ್ವಕನ್ನಡಿಗ ನ್ಯೂಸ್): ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಕರ್ನಾಟಕ ಸಂಘ ಕತಾರ್ ಕಾರ್ಯಕಾರಿ ಸಮಿತಿಯು ಐಡಿಯಲ್ ಇಂಡಿಯನ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀ ಸೈಯದ್ ಶೌಕತ್ ಅಲಿ ಅವರನ್ನು ಸನ್ಮಾನಿಸಲಾಯಿತು.
ಶ್ರೀ ಸೈಯದ್ ಶೌಕತ್ ಅಲಿ ಅವರು ಕರ್ನಾಟಕದ ಬೆಂಗಳೂರಿನವರು, ಕತಾರ್ನಲ್ಲಿ ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಅವರು ಕತಾರ್ನಲ್ಲಿ ಕನ್ನಡ ಸಮುದಾಯದ ಬೆಳವಣಿಗೆ ಹಾಗೂ ಶಾಲೆಗಳಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾರತದ ರಾಯಭಾರ ಕಚೇರಿಯ ಮೊದಲನೇ ಕಾರ್ಯದರ್ಶಿ ಶ್ರೀ. ಶಂಕಪಾಲ್, ಭಾರತೀಯ ಸಂಸ್ಕೃತಿ ಕೇಂದ್ರದ ಅಧ್ಯಕ್ಷರು ಶ್ರೀ ಪಿ ಎನ್ ಬಾಬುರಾಜನ್, ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರು ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು, ಕತಾರ್ನ ವಿವಿಧ ಶಾಲೆಗಳ ಪ್ರಾಂಶುಪಾಲರು, ಭಾರತೀಯ ಸಾಂಸ್ಕೃತಿಕ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಕೃಷ್ಣ ಕುಮಾರ್, ಸಲಹಾ ಸಮಿತಿ ಸದಸ್ಯರು ಶ್ರೀ ಪ್ರಸಾದ್ ಮತ್ತು ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷರು ಶ್ರೀ ಮಹೇಶ್ ಗೌಡ ಪಾಲ್ಗೊಂಡಿದ್ದರು.
ಶ್ರೀ ಸೈಯದ್ ಶೌಕತ್ ಅಲಿ ಅವರಿಗೆ ಉತ್ತಮ ಆರೋಗ್ಯ ಮತ್ತು ಅವರು ಭವಿಷ್ಯದ ಕೆಲಸಗಳಲ್ಲಿ ಯಶಸ್ಸನ್ನು ಕಾಣಲಿ ಎಂದು ಕರ್ನಾಟಕ ಸಂಘ ಕತಾರ್ ಆಶಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.