ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅವಹೇಳನಕಾರಿ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಮುರ್ಹಿಯಾ ನಿವಾಸಿ ಮತ್ತು 12 ನೇ ತರಗತಿ ವಿದ್ಯಾರ್ಥಿ ಆಶಿಶ್ ಯಾದವ್ (18) ನನ್ನು ತಲ್ಗ್ರಾಮ್ ಪೊಲೀಸರು ಬಂಧಿಸಿದ್ದಾರೆ.
ಆದಿತ್ಯನಾಥ್ ಅವರ ಚಿತ್ರವನ್ನು ಆಶಿಶ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಇದು ಮುಖ್ಯಮಂತ್ರಿಯನ್ನು ಅವಮಾನಿಸಿದ ಫೋಟೋ ಎಂದು ಕೆಲವರು ರಾಜ್ಯ ಡಿಜಿಪಿಗೆ ದೂರು ನೀಡಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.