ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಹಿಮಾಚಲ ಪ್ರದೇಶ ಬಿಜೆಪಿ ಮಾಜಿ ಅಧ್ಯಕ್ಷ ಖಿಮಿ ರಾಮ್ ಮಂಗಳವಾರ ಕಾಂಗ್ರೆಸ್ ಸೇರಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಕಾರಣರಾದ ಪಕ್ಷಕ್ಕೆ ಸೇರಲು ಹೆಮ್ಮೆಯಾಗುತ್ತಿದೆ, ಬಿಜೆಪಿ ಮೇಲಿನ ಸಿಟ್ಟಿನಿಂದ ನಾನು ಕಾಂಗ್ರೆಸ್ ಸೇರುತ್ತಿಲ್ಲ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಸಲು ಆಲೋಚಿಸಿ ನಿರ್ಧಾರ ಕೈಗೊಂಡಿದ್ದೇನೆ ಎಂದು ರಾಜ್ಯದ ಮಾಜಿ ಸಚಿವ ಹಾಗೂ ಉಪಸಭಾಪತಿ ರಾಮ್ ಹೇಳಿದರು.
ಪಿಂಚಣಿ ಯೋಜನೆ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರ, ನಿರುದ್ಯೋಗ, ಹಣದುಬ್ಬರ ಮತ್ತು ಬಾಕಿ ಉಳಿದಿರುವ ನೌಕರರ ಸಮಸ್ಯೆಗಳಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ, ನಾವು ಈ ಸಮಸ್ಯೆಗಳನ್ನು ರಾಜ್ಯದ ಜನರ ಮುಂದೆ ತರುತ್ತೇವೆ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.
ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಸುಧೀರ್ ಶರ್ಮಾ ಮತ್ತು ತೇಜಿಂದರ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.