(ವಿಶ್ವ ಕನ್ನಡಿಗ ನ್ಯೂಸ್) : ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಕೆ.ಎಲ್. ರಾಹುಲ್ ಗಾಯದ ನಂತರ ಪುನರಾಗಮನ ಮಾಡುತ್ತಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ತಂಡದಲ್ಲಿಲ್ಲ. ಆಫ್ ಸ್ಪಿನ್ನರ್ ಆರ್ ಅಶ್ವಿನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ವೇಳೆ ರಾಹುಲ್ ಗಾಯಗೊಂಡಿದ್ದರು. ನಂತರ ಅವರು ಚಿಕಿತ್ಸೆಗಾಗಿ ಜರ್ಮನಿಗೆ ಹೋದರು. ಅವರು ಇತ್ತೀಚೆಗೆ ಅಲ್ಲಿಂದ ಹಿಂತಿರುಗಿದ್ದಾರೆ. ಕುಲದೀಪ್ ಯಾದವ್ ಕೂಡ ಗಾಯದ ನಂತರ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಪ್ರವಾಸದಲ್ಲಿ ಒಟ್ಟು 5 ಟಿ 20 ಗಳಿವೆ. ಟಿ20 ಸರಣಿ ಜುಲೈ 29 ರಿಂದ ಆರಂಭವಾಗಲಿದ್ದು, ಆಗಸ್ಟ್ 7 ರವರೆಗೆ ನಡೆಯಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.