ರಿಯಾದ್(ವಿಶ್ವಕನ್ನಡಿಗ ನ್ಯೂಸ್): ಇಂಡಿಯಾ ಫ್ರೆಟರ್ನಿಟಿ ಫೋರಂ, ರಿಯಾದ್ ಕರ್ನಾಟಕ ಚಾಪ್ಟರ್ ವತಿಯಿಂದ ಅನಿವಾಸಿ ಕನ್ನಡಿಗರಿಗಾಗಿ ಈದ್ ಪ್ರಯುಕ್ತ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಅದ್ದೂರಿಯಾಗಿ ರಿಯಾದಿನಲ್ಲಿ ನಡೆಸಲಾಯಿತು.
ಸದಾ ವೃತ್ತಿಪರ ಜೀವನದಲ್ಲಿ ನಿರತರಾಗಿರುವ ಅನಿವಾಸಿಗರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ ‘ಈದ್ ಮಿಲನ್’ ವೆಂಬ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಲವಾರು ಅನಿವಾಸಿಗರು ಇದರಲ್ಲಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕ್ರತಿಕ ಕಾರ್ಯಕ್ರಮ, ಕಿರುನಾಟಕ, ಮನೋರಂಜನಾ ಕ್ರೀಡಾಕೂಟ ಹಾಗೂ ಮಹಿಳೆಯರು ಮತ್ತು ಮಕ್ಕಳಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಇಂಡಿಯಾ ಫ್ರೆಟರ್ನಿಟಿ ಫೋರಂ, ರಿಯಾದ್ ಕರ್ನಾಟಕ ಚಾಪ್ಟರ್ ಅಧ್ಯಕ್ಷರಾದ ತಾಜುದ್ದೀನ್ ರವರು ಈದ್ ಮಿಲನ್ ಕಾರ್ಯಕ್ರಮವು ಭಾರತೀಯರನ್ನು ಒಂದುಗೂಡಿಸುವ ಕಿರು ಪ್ರಯತ್ನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮ ನಿರೂಪಣೆಯನ್ನು ಕವನ ವಾಚನ ಹಾಗೂ ಮನೋರಂಜನೆಯ ಮೂಲಕ ರಹೀಂ ತುಂಬೆಯವರು ನೆರವೇರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.