(www.vknews.in) : ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಚೇತನ ಫೌಂಡೇಶನ್ ಕರ್ನಾಟಕ (ರಿ) ಇದರ ಸಹಯೋಗದಲ್ಲಿ ಭಾನುವಾರ ಕನಕ ಭವನ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ನಡೆದ ಧಾರವಾಡ ನುಡಿ ಸಡಗರ ಸಮಾವೇಶದಲ್ಲಿ ಯುವ ಸಾಹಿತಿ, ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು ಅವರಿಗೆ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಿಲಾಯಿತು.
ಪ್ರಶಸ್ತಿಯನ್ನು ಪ್ರೊ ಕೆ.ಬಿ ಗುಡಸಿ ಕುಲಪತಿಗಳು ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಪ್ರೊ ನಿಜಲಿಂಗಪ್ಪ ಮಟ್ಟಿಹಾಳ ಮುಖ್ಯಸ್ಥರು ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನೀಡಿದರು ಕಾರ್ಯಕ್ರಮದಲ್ಲಿ ಯುವ ನಟ, ನಿರ್ದೇಶಕ ನಿಂಗರಾಜು ಸಿಂಗಾಡಿ ಚೇತನ ಫೌಂಡೇಶನ ಕರ್ನಾಟಕ ಅಧ್ಯಕ್ಷರಾದ ಚಂದ್ರಶೇಕರ ಮಾಡಲಗೇರಿ ಸೇರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.