ಮಂಗಳೂರು (www.vknews.in) : ಆಹಾರ ಧಾನ್ಯಗಳು ಅಗತ್ಯ ವಸ್ತುಗಳಾಗಿದ್ದರಿಂದ ಮೊದಲಿನಿಂದಲೂ ಇವುಗಳಿಗೆ ತೆರಿಗೆ ವಿನಾಯಿತಿ ನಿಡಲಾಗುತ್ತಿತ್ತು. ಆದರೆ ಈಗ ಮಜ್ಜಿಗೆ, ಮೊಸರು, ಅಕ್ಕಿ, ಜೋಳ, ರಾಗಿ ಸೇರಿದಂತೆ ಧವಸ ಧಾನ್ಯಗಳ ಮೇಲೆ ಶೇ.5 ರಷ್ಟುಜಿಎಸ್ಟಿ ವಿಧಿಸಿರುವುದು ಜನವಿರೋಧಿ ನೀತಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಇವುಗಳ ಮೇಲಿನ ಜಿಎಸ್ಟಿ ರದ್ದುಪಡಿಸಬೇಕು ಎಂದು ದಕ ಜಿಲ್ಲಾ ಜೆಡಿಎಸ್ ಮಹಿಳಾ ನಾಯಕಿ ಡಾ ಸುಮತಿ ಹೆಗ್ಡೆ ಆಗ್ರಹಿಸಿದ್ದಾರೆ.
ವಸ್ತುಗಳ ಮೇಲಿನ ಜಿಎಸ್ಟಿ ಏರಿಕೆ ಮಾಡಲಾಗಿದ್ದು ಹಾಲಿನ ಉತ್ಪನ್ನಗಳು ಸೇರಿದಂತೆ ಕೆಲ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಈ ಹೊಡೆತದಿಂದ ಚೇತರಿಸಿಕೊಳ್ಳಲು ಪರದಾಡುತ್ತಿರುವ ಜನಸಾಮಾನ್ಯರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಈ ಬಾರಿ ವಾಹನ ಮಾಲೀಕರ ಜೇಬಿಗೆ ಕತ್ತರಿ ಹಾಕಿದ್ದಾರೆ. ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲಿನ್ಯ ತಪಾಸಣೆ ದರ ಹೆಚ್ಚಿಸಿದೆ. ಇನ್ಮುಂದೆ ವಾಹನ ಎಮಿಶನ್ ಟೆಸ್ಟ್ ಬೆಲೆ ದುಬಾರಿಯಾಗಿದೆ. ಎಮಿಶನ್ ಟೆಸ್ಟ್ ಬೆಲೆ ಏರಿಕೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಗತ್ಯವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ದೇಶದಲ್ಲಿ ಸಾಲು ಸಾಲು ಬೆಲೆ ಏರಿಕೆಯಿಂದ ಜನಸಾಮಾನ್ಯ ಕಂಗಾಲಾಗಿದ್ದಾನೆ. ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ವಿಧಿಸಿರುವುದಕ್ಕೆ ಸಾರ್ವಜನಿಕರು, ವ್ಯಾಪಾರಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ದಿನಬಳಕೆಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡವರು ಜೀವನ ನಡೆಸುವುದು ಹೇಗೆ ಎಂದು ಸುಮತಿ ಹೆಗ್ಡೆ ಪ್ರಶ್ನಿಸಿದ್ದಾರೆ.
ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್, ಅಡುಗೆ ಎಣ್ಣೆ, ತರಕಾರಿ, ಬೇಳೆ ಕಾಳು ಸೇರಿದಂತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ಬಡವರು ಜೀವನ ನಡೆಸುವುದೇ ದುಸ್ತರವಾಗಿದೆ. ಇದೀಗ ಕೇಂದ್ರ ಸರ್ಕಾರ ಆಹಾರ ಪಾದಾರ್ಥಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸುತ್ತಿರುವುದರಿಂದ ಇನ್ನಷ್ಟುಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.