(www.vknews.in) : GST ಹೆಸರಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಜನರನ್ನು ಲೂಟಿ ಮಾಡುವ ಸಲುವಾಗಿ ಅಕ್ಕಿ, ಗೋಧಿ, ಬೆಲ್ಲ, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ಅಗತ್ಯ ಆಹಾರ ವಸ್ತುಗಳ ಮೇಲೂ ಅನಗತ್ಯ ತೆರಿಗೆ ವಿಧಿಸಿ ಬಡವರ ಬದುಕಿನ ಮೇಲೆ ಗದಾ ಪ್ರಹಾರ ನಡೆಸಿ ಜೀವನವನ್ನೇ ಬರ್ಬಾದ್ ಮಾಡಲು ಹೊರಟಿದೆ. ಸರ್ಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಮುನ್ನೂರು ಬ್ಲಾಕ್ ಸಮಿತಿ ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತು.
ಪ್ರತಿಭಟನೆಯನ್ನುದ್ದೇಶಿಸಿ ಪ್ರಸ್ತಾವಿಕವಾಗಿ ರಹಿಮಾನ್ ಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ SDPi ಜಿಲ್ಲಾ ಸಮಿತಿ ಸದಸ್ಯರಾದ ಝಕೀರ್ ಉಳ್ಳಾಲ್, ಮಂಗಳೂರು ವಿಧಾನಸಬಾ ಜೊತೆ ಕಾರ್ಯದರ್ಶಿ ಉಬೈದ್ ಅಮ್ಮೆ0ಬಳ, ಮುನ್ನೂರು ಬ್ಲಾಕ್ ಅಧ್ಯಕ್ಷರಾದ ಬಶೀರ್ SM, ಕಾರ್ಯದರ್ಶಿ ನವಾಝ್ ಕುತ್ತಾರ್, ಬೆಲ್ಮ ಗ್ರಾಮ ಸಮಿತಿ ಅಧ್ಯಕ್ಷರಾದ ಅಶ್ರಫ್ ಡಿ.ಎ., ಕಾರ್ಯದರ್ಶಿ ಶಬೀರ್ ದೇರಳಕಟ್ಟೆ, ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಅರೀಫ್ ಮದನಿ ನಗರ, ಮದನಿ ನಗರ ಬ್ರಾಂಚ್ ಅಧ್ಯಕ್ಷರಾದ ಝುಬೈರ್ ಮದನಿನಗರ, ಶುಕುರ್ ಮದಕ ಹಾಗೂ ಕಾರ್ಯಕರ್ತರು ನಾಗರಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಶ್ರಫ್ ಡಿ.ಎ. ನಿರೂಪಿಸಿದರು. ರಹಿಮಾನ್ ಕುತ್ತಾರ್ ಧನ್ಯವಾದ ಸಲ್ಲಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.