ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ‘ಜೈ ಶ್ರೀರಾಮ್’ ಎಂದು ಹೇಳುವಂತೆ ಒತ್ತಾಯಿಸಿ ಹುಡುಗನೊಬ್ಬನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಚಾರ್ಮಿನಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾದ್ ಕೆಫೆ ಹುಸೇನಿ ಆಲಂನಿಂದ ಬೋನಾಲು ಜಾತ್ರಾ ಮೆರವಣಿಗೆ ಸಾಗುತ್ತಿತ್ತು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಹುಸೇನಿ ಆಲಂ ನಿವಾಸಿಯಾದ 17 ವರ್ಷದ ಹುಡುಗ ನಡೆದುಕೊಂಡು ಹೋಗುತ್ತಿದ್ದ, ಈ ವೇಳೆ ಏಕಾಏಕಿ ದುಷ್ಕರ್ಮಿಗಳ ಗುಂಪೊಂದು ಹುಡುಗನನ್ನು ತಡೆದು ಹಣೆಗೆ ತಿಲಕವಿಟ್ಟು ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ. ಘೋಷಣೆ ಕೂಗಲು ಹುಡುಗ ನಿರಾಕರಿಸಿದ್ದರಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ಹುಡುಗ ಆರೋಪಿಸಿದ್ದಾನೆ. ಈ ಬಗ್ಗೆ ಬಾಲಕ ಚಾರ್ಮಿನಾರ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.