ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಪಬ್ ಒಂದರಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪಾರ್ಟಿಯನ್ನು ಸಂಘಪರಿವಾರದ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.
ಪಾರ್ಟಿ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಸಂಘಪರಿವಾರದ ಕಾರ್ಯಕರ್ತರು ಪಬ್ ಒಳಗೆ ನುಗ್ಗಿ ಮೋಜಿನಲ್ಲಿ ನಿರತರಾದವರಿಗೆ ಎಚ್ಚರಿಕೆ ನೀಡಿ ಹೊರ ಕಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾರ್ಟಿಯನ್ನು ಅರ್ಧದಲ್ಲೇ ನಿಲ್ಲಿಸಿ ತೆರಳಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಂಘಪರಿವಾರದ ಕಾರ್ಯಕರ್ತರನ್ನು ಚದುರಿಸಿದ್ದಾರೆ ಎಂದು ತಿಳಿದುಬಂದಿದೆ. .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.