ಮಂಗಳೂರು ಪರಿಸರದ 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ..
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ನಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಸ್ಲಿಮ್ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದ್ದು, ಸುರತ್ಕಲ್ ಸಮೀಪದ ಮಂಗಳಪೇಟೆಯ ನಿವಾಸಿ ಫಾಝಿಲ್ ಮೃತಪಟ್ಟಿದ್ದಾರೆ.
ಈ ಸಂಬಂಧವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸ್ ಆಯುಕ್ತ ಎನ್, ಶಶಿಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ ಹಲ್ಲೆಯ ಸಂದರ್ಭ ಹಾಜರಿದ್ದ ಪ್ರತ್ಯಕ್ಷದರ್ಶಿಗಳನ್ನು ತನಿಖೆ ಮಾಡುತ್ತಿದ್ದೇವೆ, ಕೊಲೆಗೆ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.
ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಪೊಲೀಸ್ 4 ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿದ್ದು, ಈ ನಿಷೇದಾಜ್ಞೆ ಜುಲೈ 30 ರ ಬೆಳಗ್ಗೆವರೆಗೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.