ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರಾವಳಿ ಜಿಲ್ಲೆಯಲ್ಲಿ ಮತ್ತೆ ಕೋಮುವೈಷಮ್ಯವು ಮತ್ತೆ ಕೊಲೆ ಸರಣಿಗೆ ಬಂದು ನಿಂತಿದೆ. ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದರೂ ಓರ್ವರ ಮನೆಗೆ ಮಾತ್ರ ಭೇಟಿ ಕೊಡುವ ಮೂಲಕ ಮುಖ್ಯಮಂತ್ರಿಗಳು ತಾರತಮ್ಯ ನೀತಿ ಅನುಸರಿಸಿದ್ದಾರೆ. ಆ ನಿಟ್ಟಿನಲ್ಲಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯು ತಳೆದಿರುವ ನಿಲುವು ಸ್ವಾಗತಾರ್ಹವಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸರಕಾರವೇ ಬಹಿರಂಗವಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಬಹಿಷ್ಕರಿಸಿರುವುದನ್ನು ಪ್ರಜ್ಞಾವಂತ ನಾಗರಿಕ ಸಮಾಜ ಒಪ್ಪದು. ಈ ರೀತಿ ಒಂದೇ ಮನೆಗೆ ಭೇಟಿ ನೀಡಿ ಉಳಿದವರನ್ನು ನಿರ್ಲಕ್ಷಿಸಲು ಕಾರಣವೇನೆಂದು ರಾಜ್ಯದ ಜನತೆಯ ಮುಂದೆ ರಾಜ್ಯದ ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು.
ಹಂತಕರನ್ನು ಬಂಧಿಸಬೇಕೆಂಬ ಒತ್ತಡಕ್ಕೊಳಗಾಗಿ ಪೊಲಿಸ್ ಇಲಾಖೆಯು ಅಮಾಯಕರನ್ನು ಬಂಧಿಸದಂತೆ ಸರಕಾರವು ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.