ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ಕಾಸರಗೋಡಿನ ಪೇಂಟರ್ ಒಬ್ಬರು ಸಾಲದಲ್ಲಿ ಸಿಲುಕಿ ಹೊಸದಾಗಿ ನಿರ್ಮಿಸಿದ ಮನೆಯನ್ನೇ ಮಾರಲು ಹೊರಟಿದ್ದರು, ಈ ಸಂದರ್ಭದಲ್ಲಿ ಅವರ ಅದೃಷ್ಟ ಎಂಬಂತೆ ಅವರಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಲಾಟರಿ ಹೊಡೆದಿದೆ.
ಪಾವೂರಿನ ಮೊಹಮ್ಮದ್ ಬಾವ (50) ಅವರು ಮಂಜೇಶ್ವರದಲ್ಲಿ ಹೊಸದಾಗಿ ಮನೆ ನಿರ್ಮಿಸಿದ್ದರು, ಇದರಿಂದ ಅವರಿಗೆ ತುಂಬಾ ಸಾಲವುಂಟಾಗಿತ್ತು, ಸಾಲಗಾರರಿಂದ ಬೇಸತ್ತು ಮನೆಯನ್ನು ಮಾರಾಟಕ್ಕಿಟ್ಟಿದ್ದರು. ಮನೆಗೆ ಟೋಕನ್ ಹಣ ಸ್ವೀಕರಿಸುವ ಎರಡು ಗಂಟೆಗಳ ಮೊದಲು ಅವರಿಗೆ 1 ಕೋಟಿ ರೂಪಾಯಿ ಲಾಟರಿ ಬಹುಮಾನ ಲಭಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.