ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಇವರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಉದ್ರೇಕಕಾರಿ, ಕೋಮು ಪ್ರಚೋದನೆ ನೀಡುತ್ತಿದ್ದ ಆರೋಪದ ಮೇರೆಗೆ ಕಾಗವಾಡ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಶಿರಗುಪ್ಪಿ ಇಂದಿರಾ ನಗರ ನಿವಾಸಿ ತೌಸಿಫ್ ಹಾಗೂ ದೆಹಲಿ ಮೂಲದ ರೇಹಾನ್ ಅಹ್ಮದ್ ಸಿದ್ಧಿಕಿ ಬಂಧಿತರು. ಇವರ ಮೇಲೆ ಕೋಮು ಪ್ರಚೋದನೆ, ಗಲಾಟೆ ಉಂಟು ಮಾಡುವಂತ ಚಟುವಟಿಕೆಗೆ ಪ್ರಚೋದನೆ ನೀಡುವ ಪೋಸ್ಟ್ ಮಾಡಿರುವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.