ಕೋಮು ಗಲಭೆಯ ಮಧ್ಯೆ ಸೌಹಾರ್ದತೆ ಮೆರೆದ ಯುವಕನಿಗೆ ಅಭಿನಂದನೆಗಳ ಮಹಾಪೂರ..
ಸುಬ್ರಹ್ಮಣ್ಯ (ವಿಶ್ವ ಕನ್ನಡಿಗ ನ್ಯೂಸ್) : ಕೋಮು ಗಲಭೆಯ ನಡುವೆ ಬೂದಿ ಮುಚ್ಚಿದ ಕೆಂಡದಂತಿರುವ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವೊ೦ದರ ಯುವಕನ ಕೋಮು ಸೌಹಾರ್ದತೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರವಾಹಕ್ಕೆ ತತ್ತರಿಸಿದ್ದ ಹರಿಹರ ಪಲ್ಲತಡ್ಕದಲ್ಲಿ ತೆರವು ಕಾರ್ಯ ನಡೆಸುತ್ತಿದ್ದ ಕ್ರೇನ್ ಚಾಲಕನೋರ್ವ ಆಕಸ್ಮಿಕವಾಗಿ ನೀರಿಗೆ ಬಿದ್ದ ಸಂದರ್ಭ ತನ್ನ ಪ್ರಾಣದ ಹಂಗನ್ನು ತೊರೆದು ಆತನನ್ನು ರಕ್ಷಿಸಿದ ಯುವಕನಿಗೆ ಸಾಲು ಸಾಲು ಅಭಿನಂದನೆ ಹರಿದುಬರುತ್ತಿದೆ.
ಪ್ರವಾಹದಿಂದ ತತ್ತರಿಸಿದ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲು ಕ್ರೇನ್ ಚಾಲಕನಾಗಿ ಬಂದಿದ್ದ ಶರೀಫ್ ಎನ್ನುವ ವ್ಯಕ್ತಿ ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ, ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸೋಮಶೇಖರ್ ಕಟ್ಟಿಮನೆ ಎನ್ನುವ ಯುವಕ ತನ್ನ ಪ್ರಾಣದ ಹಂಗನ್ನು ತೊರೆದು, ನೀರಿಗೆ ಹಾರಿ ಶರೀಫ್ ನನ್ನು ರಕ್ಷಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.