ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಬೈಕ್ ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಉಂಟಾದ ಜಗಳದಲ್ಲಿ ಆರ್ ಎಸ್ ಎಸ್ ಕಾಯಕರ್ತನಿಗೆ ಚಾಕುವಿನಿಂದ ಇರಿದ ಘಟನೆ ಕೋಲಾರದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಆರೆಸ್ಸೆಸ್ ಕಾರ್ಯಕರ್ತ ಮಾಲೂರಿನ ರವಿ ಎಂದು ಗುರುತಿಸಲಾಗಿದೆ.
ರವಿ ಜಗಳ ಬಿಡಿಸೋದಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ರವಿಯ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಆರ್ ಎಸ್ ಎಸ್ ಕಾರ್ಯಕರ್ತರು, ಮಾಲೂರು ಬಸ್ ನಿಲ್ದಾಣದ ಎದುರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.