ಹಿಂದುತ್ವದ ಅಜೆಂಡಾದ ಪರಿಕಲ್ಪನೆಯೊಂದಿಗೆ ಬರಲಿದೆ ಹೊಸ ಪಕ್ಷ..
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿಗೆ ಪರ್ಯಾಯವಾಗಿ ಆಗಸ್ಟ್ 7 ರಂದು ವಿನಾಯಕ್ ಮಾಳದಕರ್ ಅಧ್ಯಕ್ಷತೆಯಲ್ಲಿ ಹಿಂದೂಸ್ತಾನ್ ಜನತಾ ಪಾರ್ಟಿ ಅಸ್ತಿತ್ವಕ್ಕೆ ಬರಲಿದೆ. ಹಿಂದುತ್ವದ ಅಜೆಂಡಾದ ಪರಿಕಲ್ಪನೆಯೊಂದಿಗೆ ಬಿಜೆಪಿ ಮತ್ತು ಇತರೆ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದೆ .
ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮಠಾಧೀಶರು ನೂತನ ಪಕ್ಷಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಪಕ್ಷವು ಮುಂದಿನ ವಿಧಾಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಲು ಚಿಂತನೆ ನಡೆಸಿದೆ.
ಅಲ್ಲದೇ ಹೊಸ ಪಕ್ಷದ ಪ್ರಣಾಳಿಕೆಯೂ ಬಿಡುಗಡೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದೂ ಭವನ ನಿರ್ಮಾಣ, 100ಯೂನಿಟ್ವರೆಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಮಹಾನಗರ ಸಾರಿಗೆ ಉಚಿತ ಪ್ರಯಾಣ, ಎಲ್ಲಾ ವರ್ಗದ ಶಾಲೆ ಮಕ್ಕಳಿಗೆ ಉಚಿತ ಬಸ್ ಪಾಸ್,ಎಲ್ಲರಿಗೂ ವಿಶ್ವದರ್ಜೆಯ ಉಚಿತ ಶಿಕ್ಷಣ ಸೌಲಭ್ಯ, ಬೀದಿ ವ್ಯಾಪಾರಿಗಳಿಗೆ ಮನೆಕಟ್ಟಲು 5 ಲಕ್ಷ ಸಹಾಯಧನ ಸೇರಿದಂತೆ ಇತರ ಸೌಲಭ್ಯ ಜನರಿಗೆ ಒದಗಿಸಲು ಪಕ್ಷ ಚಿಂತನೆ ನಡೆಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.