ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) :ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಬೇಕು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಆಚರಣೆ ಅರ್ಥಪೂರ್ಣವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಎಂಜಿ ರಸ್ತೆಯಲ್ಲಿ ತಾಲ್ಲೂಕು ಕಂದಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು , ಆ .೧೩ , ೧೪ , ೧೫ ರಂದು ನಾಗರಿಕರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಹೇಳಿದರು.
ಸಮಾಜದ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವಂತೆ ತ್ರಿವರ್ಣ ಧ್ವಜ ಮಾರಾಟ ದರ ರೂ .೨೨ ಕ್ಕೆ ನಿಗದಿಪಡಿಸಲಾಗಿದೆ . ಪ್ರತಿ ಮನೆಯ ಮೇಲೂ ಸ್ವಾತಂತ್ರ್ಯ ಸಂಭದ ಸಂಕೇತವಾಗಿ ತಪ್ಪದೆ ಧ್ವಜಾರೋಹಣ ಮಾಡುವುದರ ಮೂಲಕ ರಾಷ್ಟ್ರ ಪ್ರೇಮ ಮೆರೆಯಬೇಕು ಎಂದು ಹೇಳಿದರು.
ಶಿರಸ್ತೇದಾರ್ ಮನೋಹರ ಮಾನೆ , ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ , ಗ್ರಾಮ ಲೆಕ್ಕಾಧಿಕಾರಿ ಭೀಮರಾವ್ , ನಾಗರಾಜ್ ಮತ್ತಿತರರು ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.