ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ ಆಗಸ್ಟ್ 15 ರಂದು ರಾತ್ರಿ 9 ಗಂಟೆಗೆ ಕೆಸಿಎಫ್ ಒಮಾನ್ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ರಾದ ಮೌಲಾನ ಶಾಫಿ ಸ ಅದಿ ಇವರು ಉದ್ಘಾಟಿಸಲಿರುವ ಕಾರ್ಯಕ್ರಮ ದಲ್ಲಿ ಇಹ್ಸಾನ್ ಕರ್ನಾಟಕ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಶಿವಮೊಗ್ಗ ಇವರು ಮುಖ್ಯ ಪ್ರಭಾಷಣಗೈಯಲಿದ್ದಾರೆ.
ಕಾರ್ಯಕ್ರಮ ದಲ್ಲಿ ಜನಾಬ್ ಇಕ್ಬಾಲ್ ಬರ್ಕ, ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ , ಜನಾಬ್ ಆರಿಫ್ ಕೋಡಿ,ಇಬ್ರಾಹಿಮ್ ಹಾಜಿ ಅತ್ರಾಡಿ, ಸಾದಿಕ್ ಹಾಜಿ, ಹಂಝ ಹಾಜಿ ಕನ್ನಂಗಾರ್, ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು, ವಿವಿಧ ಝೋನ್ ಗಳ ನಾಯಕರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.
ಆಗಸ್ಟ್ 19 ರಂದು ಶುಕ್ರವಾರ ಕೆಸಿಎಫ್ ಒಮಾನ್ ಸೊಹಾರ್ ಝೋನ್ ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ವು ಮಿನಿಸ್ಟರಿ ಆಫ್ ಹೆಲ್ತ್ ಬುರೈಮಿ ಹಾಸ್ಪಿಟಲ್ ನಲ್ಲಿ ನಡೆಯಲಿದೆ ಹಾಗೂ ಕೆಸಿಎಫ್ ಒಮಾನ್ ಸದಸ್ಯರಿಗೆ ದೇಶ ಭಕ್ತಿ ಗೀತೆ ಸ್ಪರ್ಧೆ ಜನರಲ್ ಮತ್ತು ಜೂನಿಯರ್ ವಿಭಾಗದಲ್ಲಿ ನಡೆಯಲಿದೆ ಎಂದು ಕೆಸಿಎಫ್ ಒಮಾನ್ ಮೀಡಿಯಾ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.