ಎಲಿಮಲೆ(ವಿಶ್ವಕನ್ನಡಿಗ ನ್ಯೂಸ್): ನುಸ್ರತುಲ್ ಇಸ್ಲಾಮ್ ಎಸೋಸಿಯೇಶನ್(ರಿ) ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜುಮಾ ಮಸೀದಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವವು ಜರಗಿತು.
ಸ್ಥಳೀಯ ಮುದರ್ರಿಸ್ ಜೌಹರ್ ಅಹ್ಸನಿ ಯವರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ವೀರರನ್ನು ಸ್ಮರಿಸಿ ಅವರಿಗಾಗಿ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಿದರು. ಎಲಿಮಲೆ ಜಮಾಅತ್ ಕಮಿಟಿ ಉಪಾಧ್ಯಕ್ಷರಾದ ಯೂಸುಫ್ ಜೀರ್ಮಕ್ಕಿ ಯವರು ಧ್ವಜಾರೋಹಣ ಗೈದರು. ರಾಷ್ಟ್ರ ಧ್ವಜಕ್ಕೆ ಗೌರವ ವಂದನೆಯನ್ನು ಸಲ್ಲಿಸಿ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ನುಸ್ರತ್ ಉಪಾಧ್ಯಕ್ಷರಾದ ಸೂಫಿ ಮುಸ್ಲಿಯಾರ್ ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಹಯಾತುಲ್ ಇಸ್ಲಾಂ ದರ್ಸ್ ಹಾಗೂ ನೂರುಲ್ ಹುದಾ ಮದ್ರಸ ವಿಧ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ ನುಸ್ರತ್ ಪ್ರಧಾನ ಕಾರ್ಯದರ್ಶಿ ಸೂಫಿ ಎಲಿಮಲೆ ಸ್ವಾಗತಿಸಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.