ಚಳ್ಳಕೆರೆ (www.vknews.in) : ನಾನು ಓದಿದ ಶಾಲೆಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನನ್ನ ದುಡಿಮೆಯ ಸ್ವಲ್ಪ ಭಾಗದಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣೆ ಮಾಡುತ್ತಿದ್ದೇನೆ ಎಂದು ಹಳೆಯ ವಿದ್ಯಾರ್ಥಿ ಇಸ್ಮಾಯಿಲ್ ಹೇಳಿದರು. ಚಳ್ಳಕೆರೆ ನಗರದ ಮದಕರಿ ನಗರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ೭೫ ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ನೋಟ್ ವಿತರಿಸಿ ಮಾತನಾಡಿದರು.
ಇದೇ ರೀತಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉತ್ತನ ಉದ್ದೆಗಳನ್ನು ಅಲಂಕರಿಸಿಕೊAಡವರು ,ದಾನಿಗಳು ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಕಟ್ಟಡಗಳ ಅಭಿವೃದ್ಧಿಗೆ ನೆರವು ನೀಡಿದಾಗ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ ನಾಡು ೨೦೧೭ ರಿಂದಲೂ ಪ್ರತಿವರ್ಷ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿರುವುದು ನನಗೆ ಸಂತೋಷ ತಂದಿದೆ ಎಂದು ತಿಳಿಸಿದರು. ಇಸ್ಮಾಯಿಲ್ ಪದೇ ಪದೇ ಶಾಲೆಗೆ ಗೈರು ಹಾಜರಿಯಾಗುವಾಗ ಶಾಲೆಗೆ ಕರೆದುಕೊಂಡು ಬಂದ ಪರಿಣಾಮವಾಗಿ ಇಂದು ಸ್ವಯಂ ಉದ್ಯೋಗಿಯಾಗಿದ್ದು ಪ್ರತಿ ವರ್ಷ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ನೋಟ್ ಬುಕ್ ವಿತರಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಉಬೇದುಲ್ಲಾ , ಮುಜೀಬ್, U ಶಿಕ್ಷಕಿಯರಾದ ನರ್ಸೀನ್ ಕೌಸರ್ , ಶಮೀಮ್ ಅಪ್ಸರ್ , ಹಾಗೂ ಸಿಬ್ಬಂದಿಗಳು ಇದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.