(www.vknews.in) : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಕುರಿಯ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ಜಬ್ಬಾರ್ ಇವರು ಪೂರ್ವಾಹ್ನ 9ಗಂಟೆಗೆ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಬ್ಯಾಂಡ್ ದಳ ಹಾಗೂ ಸೇವಾದಳ ದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆಯನ್ನು ನಡೆಸಲಾಯಿತು.
ತದನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಎಂ.ಎಸ್.ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯರೂ, ಎಸ್ಡಿಎಂಸಿ ನಾಮನಿರ್ದೇಶಿತ ಸದಸ್ಯರು ಆದ ಶ್ರೀ ಬೂಡಿಯಾರು ಪುರುಷೋತ್ತಮ ರೈ, ಪಂಚಾಯತ್ ಸದಸ್ಯರುಗಳಾದ ಶ್ರೀಯುತ ಯಾಕೂಬ್, ಶ್ರೀಯುತ ನಾಗೇಶ್, ಶ್ರೀಮತಿ ಕಲಾವತಿ, ಎಪಿಎಂಸಿ ಮಾಜಿ ಅಧ್ಯಕ್ಷರು ಹಾಗೂ ಶಾಲಾ ಕೊಡುಗೈ ದಾನಿಗಳೂ ಆದ ಶ್ರೀ ಬೂಡಿಯಾರು ರಾಧಾಕೃಷ್ಣ ರೈ, ಆದರ್ಶ ವಿವಿಧೋದ್ದೇಶ ಸೊಸೈಟಿಯ ಅಧ್ಯಕ್ಷರಾದ ಜಯರಾಜ್ ಭಂಡಾರಿ, ಶಾಲಾ ಕೊಡುಗೈದಾನಿ ಗಳಾದ ಶ್ರೀ ಶಿವರಾಮ ಆಳ್ವ ಬಳ್ಳಮಜಲು, ವಿಷ್ಣುಮೂರ್ತಿ ದೇವಸ್ಥಾನದ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀ ಚಂದ್ರಹಾಸ ರೈ, ಕುರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಶ್ರೀಯುತ ಚಂದ್ರಹಾಸ ರೈ ಡಿಂಬ್ರಿ, ಆರ್ಯಾಪು ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗಣೇಶ್ ರೈ, ತಾಲೂಕು ಅಂಗನವಾಡಿ ಕಾರ್ಯ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಕಮಲ, ನಮ್ಮ ಶಾಲಾ ಮಾಜಿ ಮುಖ್ಯ ಅಡುಗೆಯವರಾದ ಶ್ರೀಮತಿ ಗೀತಾ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಸಂಕಪ್ಪ ,ಶ್ರೀಯುತ ಸೂಫಿ ಕುರಿಯ, ಪತ್ರಕರ್ತರಾದ ಶ್ರೀಯುತ ಸಮೀರ್ ಕುರಿಯ, ಹಿರಿಯ ವಿದ್ಯಾರ್ಥಿಗಳಾದ ಶ್ರೀ ಆಶ್ರಫ್, ಶ್ರೀ ಆಸಿಫ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಗೌರವ ಶಿಕ್ಷಕಿಯಾಗಿ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಶ್ರೀಮತಿ ಗೀತಾ ಇವರನ್ನು ಸನ್ಮಾನಿಸಲಾಯಿತು ಅಲ್ಲದೆ 2021- 22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿನಿಯರಾದ ಕುಮಾರಿ ವಿಂದ್ಯಾಶ್ರೀ, ಕುಮಾರಿ ಸ್ವಸ್ತಿಕ ಕುಮಾರಿ ವೀಕ್ಷ ,ಕುಮಾರಿ ವಿಂದ್ಯಾಶ್ರೀ ರೈ, ಕುಮಾರಿ ಆಶಿಕಾ ಕುಮಾರಿ ಫಾತಿಮತ್ ಬುಶ್ರಾ ಇವರನ್ನು ಅಭಿನಂದಿಸಲಾಯಿತು.
ಶಾಲಾ ಮುಖ್ಯಗುರುಗಳಾದ ಶ್ರೀಮತಿ ಲೀಲಾವತಿಯವರು ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರೌಢಶಾಲಾ ಸಹಶಿಕ್ಷಕರಾದ ಶ್ರೀಯುತ ಜಗದೀಶ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ದಿವ್ಯಜ್ಯೋತಿ ಯವರು ಧನ್ಯವಾದವಿತ್ತರು. ಎಸ್ಡಿ ಎಂಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.