ಕುವೈಟ್(ವಿಶ್ವಕನ್ನಡಿಗ ನ್ಯೂಸ್): ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ದೇಶದ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮವು KCF ಕುವೈತ್ ರಾಷ್ಟ್ರೀಯ ಅಧ್ಯಕ್ಷ ಹುಸೈನ್ ಎರ್ಮಾಡ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ಅಧ್ಯಕ್ಷರಾದ ಬಹು ಶಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್ ರವರು ದುಃಅ ನೆರೆವೇರಿಸಿದರು. ನಂತರ ಇಹ್ಸಾನ್ ಅಧ್ಯಕ್ಷ ಬಹು ಉಮರುಲ್ ಫಾರೂಕ್ ಸಖಾಫಿ ಸ್ವಾಗತ ಕೋರಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ಮಾತನಾಡಿದರು.
ಸಂಘಟನಾ ವಿಭಾಗ ಅಧ್ಯಕ್ಷರಾದ ಬಹು ಉಮರ್ ಝುಹುರಿ ಉಸ್ತಾದ್ ರವರು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಉದ್ಘಾಟನೆ ಗೈದು ಸವಿ ವಿವರವಾಗಿ ಮಾತನಾಡಿದರು. ಅದೇ ರೀತಿ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು ಹುಸೈನ್ ಎರ್ಮಡ್ ಉಸ್ತಾದರು ಅಧ್ಯಕ್ಷ ಭಾಷಣ ಗೈದು ವೇದಿಕೆಯಲ್ಲಿ ರಾಷ್ಟ್ರೀಯ ಸಮಿತಿಯ ಸಾಂತ್ವನ ವಿಭಾಗದ ಕಾರ್ಯದರ್ಶಿಜನಾಬ್ ಅಬ್ದುಲ್ ಮಲಿಕ್ ಸೂರಿಂಜೆ ಹಾಜರಿದ್ದು ಆಶಂಸ ಭಾಷಣವನ್ನು ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಕಾರ್ಯದರ್ಶಿ ಜನಾಬ್ ಇಬ್ರಾಹಿಂ ವೇಣೂರು ರಾಷ್ಟ್ರೀಯ ಸಮಿತಿ ಸದಸ್ಯರಾದ ಜನಾಬ್ ಸಂಸುಂದ್ದಿನ್ ಬೆಜ್ಜವಳ್ಳಿ, ಸೌತ್ ಝೋನ್ ಕಾರ್ಯದರ್ಶಿ ಜನಾಬ್ ಮುನೀರ್ ಕಾರ್ಕಳ ಮಾತನಾಡಿದರು.
ವೇದಿಕೆ ಯಲ್ಲಿ ಸೌತ್ ಝೋನ್ ಅಧ್ಯಕ್ಷ ಜನಾಬ್ sm ಉಮರಬ್ಬ ಪಬ್ಲಿಕೇಶನ್ ನೇತಾರರು ಜನಾಬ್ ಸಿರಾಜ್ ಕೃಷ್ಣಾಪುರ ಫಹಾಹಿಲ್ ಸೆಕ್ಟರ್ ಕಾರ್ಯದರ್ಶಿ ಜನಾಬ್ ಹಮೀದ್ ಮೂಳೂರು ಮೆಹಬೂಲ ಸೆಕ್ಟರ್ ಅಧ್ಯಕ್ಷ ಜನಾಬ್ ಸಂಸುಂದ್ದಿನ್ ಕುಂದಾಪುರ ಸೌತ್ ಝೋನ್ ಪಬ್ಲಿಕೇಶನ್ ಕೊರ್ಡಿನೆಟರ್ ಜನಾಬ್ ಅನ್ವರ್ ಬಜ್ಪೆ ಹಾಗೂ ರಾಷ್ಟ್ರೀಯ ಸಮಿತಿ ಝೋನ್ ಸೆಕ್ಟರ್ ಸದಸ್ಯರು ಪಾಲ್ಗೊಂಡಿದ್ದರು.ಕೊನೆಯಲ್ಲಿ ಬಹು ಹುಸೈನ್ ಎರ್ಮಾಡ್ ಉಸ್ತಾದರ ದುವಾ ದೊಂದಿಗೆ ಮತ್ತು ರಾಷ್ಟ್ರ ಗೀತೆ ಹಾಡಿ, ಜನಾಬ್ ಸಂಸುಂದ್ದಿನ್ ಬೆಜ್ಜವಳ್ಳಿ ಧನ್ಯವಾದಗೈದು ಮೂರು ಸ್ವಲಾತ್ನೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.