ಕಾಸರಗೋಡು (www.vknews.in) : ಮಣಿಯಂಪಾರೆ ಅಣೆಕಟ್ಟಿನಲ್ಲಿ ಸ್ನಾನ ಮಾಡುತ್ತಿದ್ದಾಗ ನೀರು ಪಾಲಾಗಿದ್ದ ಮುಹಿಮ್ಮಾತ್ ವಿದ್ಯಾರ್ಥಿಯ ಮೃತ ದೇಹ ಮಂಗಳವಾರ ಸಂಜೆ ಪತ್ತೆಯಾಗಿದೆ. ಚಲ್ಲಂಗಯ ಸಿ.ಜೆ ಮೂಲೆಯ ಅಬ್ದುಲ್ಲರವರ ಪುತ್ರ ಜಸ್ವಾ ದ್ (17) ಮೃತ ಪಟ್ಟವರು.
ಘಟನೆ ನಡೆದ ಸ್ಥಳದ ಅಲ್ಪ ದೂರದಲ್ಲಿ ಪತ್ತೆಯಾಗಿದೆ. ಸೋಮವಾರ ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿತ್ತು. ಬಳಿಕ ಅಗ್ನಿಶಾಮಕ ದಳದ ಸಿಬಂದಿಗಳು, ಬದಿಯಡ್ಕ ಠಾಣಾ ಪೊಲೀಸರು ಶೋಧ ನಡೆಸಿದ್ದರೂ ಪತ್ತೆಯಾಗಿರಲಿಲ್ಲ . ಮಂಗಳವಾರ ಸಂಜೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.