(www.vknews.in) ಸವಣೂರು:-ಎಸ್ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸವಣೂರಿನ ಸಹಲ್ ಕಾಂಪ್ಲೆಕ್ಸ್ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.
ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾ ರವರು ಧ್ವಜಾರೋಹಣ ನೆರವೇರಿಸಿದರು, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ರಫೀಕ್ ಎಂಎ ರವರು ಸಂದೇಶ ಭಾಷಣಗೈದರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಬಾಬು ಎನ್ ಸವಣೂರು , ಚಾಪಲ್ಲ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ಉಮ್ಮರ್ ಹಾಜೀ ಕೆನರಾ,ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ಸವಣೂರು ಬ್ಲಾಕ್ ಸಮಿತಿ ಅಧ್ಯಕ್ಷರಾದ ಯೂಸುಫ್ ಹಾಜಿ ಬೇರಿಕೆ,ಸವಣೂರು ಬ್ಲಾಕ್ ಸಮಿತಿ ಕೋಶಾಧಿಕಾರಿ ಸುಲೈಮಾನ್.ಪಿಎಂ,ಅಲ್-ನೂರ್ ಮುಸ್ಲಿಂ ಯೂತ್ ಫೆಡರೇಶನ್ ಚಾಪಲ್ಲ ಅಧ್ಯಕ್ಷರಾದ ಝಕರಿಯ ಮಾಂತೂರು, ಪಿ.ಎಫ್.ಐ ಸವಣೂರು ಏರಿಯಾ ಅಧ್ಯಕ್ಷ ಅಶ್ರಫ್ ಬಿಎಂ,ಸವಣೂರು ಬ್ಲಾಕ್ ಸಮಿತಿ ಕಾರ್ಯದರ್ಶಿ ಇಕ್ಬಾಲ್ ಕೆನರಾ ಸೇರಿದಂತೆ ಪಕ್ಷದ ಕಾರ್ಯಕರ್ತರು,ಹಿತೈಷಿಗಳು ಭಾಗವಹಿಸಿದ್ದರು. ಎಸ್ಡಿಪಿಐ ಸವಣೂರು ಗ್ರಾಮ ಸಮಿತಿ ಕಾರ್ಯದರ್ಶಿ ಯಹ್ಕೂಬ್ ಸವಣೂರು ಸ್ವಾಗತಿಸಿ ,ರಫೀಕ್.ಪಿ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.