ಗೂನಡ್ಕ(ವಿಶ್ವಕನ್ನಡಿಗ ನ್ಯೂಸ್): ಗೂನಡ್ಕ ತೆಕ್ಕಿಲ್ ಮಾದರಿ ಪ್ರಾರ್ಥಮಿಕ ಹಾಗೂ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಸಂಭ್ರಮದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ತೆಕ್ಕಿಲ್ ಶಾಲೆಯ ಮಾಜಿ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ತರ್ ನೆರವೇರಿಸಿ, ನಮ್ಮ ಅನೇಕ ಮಹನೀಯರು ಹೋರಾಡಿ ತ್ಯಾಗ ಬಲಿದಾನದ ಮೂಲಕ ಸ್ವಾತಂತ್ಯವನ್ನು ತಂದುಕೊಟ್ಟಿರುತ್ತಾರೆ, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸಜ್ಜನ ಪ್ರತಿಷ್ಠಾನದ ಗೂನಡ್ಕ ಇದರ ಅಧ್ಯಕ್ಷ ಡಾ| ಉಮ್ಮರ್ ಬೀಜದ ಕಟ್ಟೆ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹನೀಯರನ್ನು ಸ್ಮರಿಸಿ ದೇಶಪ್ರೇಮವನ್ನು ಮೈಗೂಡಿಸಬೇಕು ಮತ್ತು ಪ್ರತಿಯೊಬ್ಬರು ದೇಶದ ಪ್ರಗತಿಗೆ ಕೈಜೋಡಿಸಲು ವಿನಂತಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವ್ರದ್ದಿ ಸಮಿತಿಯ ಅಧ್ಯಕ್ಷ ದಿನಕರ ಸಣ್ಣಮನೆ ವಹಿಸಿದರು. ಶಾಲಾ ಆಡಳಿತಾಧಿಕಾರಿ ರಹೀಮ್ ಬೀಜದಕಟ್ಟೆ, ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ದೀಪಿಕಾ, ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ವಾಣಿ, ದಯಾನಂದ ಓಟೆಡ್ಕ ಎಸ್.ಡಿ.ಎಂ.ಸಿ ಸದಸ್ಯರುಗಳು, ಅಧ್ಯಾಪಕವ್ರಂದ ಹಾಗು ಪೋಷಕರು ಮೊದಲಾದವರು ಉಪಸ್ಥಿತರಿದ್ದರು.
ವಿಧ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ದೇಶಭಕ್ತಿಗೇತೆ, ಸಾಂಸ್ಕೃತಿಕ ಮನೋರಂಜನ ಕಾರ್ಯಕ್ರಮ ನಡೆಯಿತು ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿಧ್ಯಾರ್ಥಿ ನಾಯಕ ಉಫೈಫ್ ಸ್ವಾಗತಿಸಿದರು, ವಿಧ್ಯಾರ್ಥಿನಿಯರಾದ ರೇಷ್ಮ ವಂಧಿಸಿದರು, ಜಶಿಕಾ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.