ಶಿಡ್ಲಘಟ್ಟ (ವಿಶ್ವ ಕನ್ನಡಿಗ ನ್ಯೂಸ್): ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರ ಎಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ತಾಲೂಕಿನ ಸಿಲ್ಕ್ ಸೊಸೈಟಿಯ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇನೆ ಎಂದು ಎಬಿಡಿ ಸಂಸ್ಥೆಯ ಅಧ್ಯಕ್ಷ ರಾಜೀವ್ ಗೌಡ ಭರವಸೆ ನೀಡಿದರು.
ನಗರದ ನಗರದಲ್ಲಿ ಅಲ್ಪಸಂಖ್ಯಾತರ ಮುಖಂಡರು ಹಾಗೂ ಸಿಲ್ಕ್ ಸೋಸೈಟಿಯ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾತನಾಡಿದ ಅವರು ರೇಷ್ಮೆ ಉದ್ಯಮವನ್ನು ನೆಚ್ಚಿಕೊಂಡು ಸಾವಿರಾರು ಜನ ಜೀವನ ನಡೆಸುತ್ತಿದ್ದಾರೆ ಅವರ ಕಲ್ಯಾಣಕ್ಕಾಗಿ ಹಲವು ವರ್ಷಗಳ ಹಿಂದೆಯೇ ಸೊಸೈಟಿಯನ್ನು ಸ್ಥಾಪಿಸಲಾಗಿದೆ ಸೊಸೈಟಿಯ ಪ್ರಗತಿಗಾಗಿ ತಮ್ಮ ಸಂಸ್ಥೆಯಿಂದ ಕೈಲಾದ ಆರ್ಥಿಕ ನೆರವು ನೀಡಲು ನಿರ್ಧರಿಸಿರುವುದಾಗಿ ರಾಜೀವ್ ಗೌಡ ತಿಳಿಸಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ ವರ್ಗಗಳ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಜೊತೆಗೆ ಕೊರೊನಾ ಎಂಬ ಮಹಾಮರಿಯಾ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಜನರ ಅನುಕೂಲಕ್ಕಾಗಿ ಆಹಾರ ಸಾಮಾಗ್ರಿಗಳ ಕೀಟಗಳನ್ನು ವಿತರಿಸಲಾಗಿದೆ ಎಂದರು.
ಕ್ಷೇತ್ರದಲ್ಲಿ ರಸ್ತೆ ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಗಾಯಾಳುಗಳು ಹಾಗೂ ರೋಗಿಗಳಿಗೆ ನೆರವು ಕಲ್ಪಿಸುವ ಸಲುವಾಗಿ ಕ್ಷೇತ್ರಾದ್ಯಂತ 10 ತುರ್ತು ವಾಹನಗಳ ಸೇವೆಯನ್ನು ಈಗಾಗಲೇ ಲೋಕಾರ್ಪಣೆಯ ಗೊಳಿಸಲಾಗಿದೆ ಎಂದ ಅವರು ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗಿದೆ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.
ಶಾಲಾ ಕಾಲೇಜುಗಳ ಪ್ರವೇಶ ಶುಲ್ಕವನ್ನು ಸಹ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಕ್ಷೇತ್ರದ 10000 ವಿದ್ಯಾರ್ಥಿಗಳಿಗಾಗಿ ಪ್ರವೇಶ ಶುಲ್ಕವನ್ನು ಪಾವತಿಸಲು ನಿರ್ಧರಿಸಲಾಗಿದೆ ಈಗಾಗಲೇ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ ಆಯಾ ಶಾಲಾ ಕಾಲೇಜುಗಳಿಗೆ ಪ್ರವೇಶ ಶುಲ್ಕವನ್ನು ಭರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಈ ಸಂದರ್ಭದಲ್ಲಿ ಸಾದಲಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಗೋವಿಂದರಾಜು, ನಗರಸಭೆಯ ಉಪಾಧ್ಯಕ್ಷ ಬಿ.ಅಫ್ಸರ್ ಪಾಷ, ಸಿಲ್ಕ್ ಸೊಸೈಟಿಯ ಅಧ್ಯಕ್ಷ ಜಿ. ರಹಮಾನ್ ಮುಸ್ಲಿಂ ಸಮಾಜದ ಧರ್ಮಗುರುಗಳಾದ ನೂರ್ ಷಾ ಸಾಬ್, ಅಲ್ಪಸಂಖ್ಯಾತರ ಮುಖಂಡರಾದ ಸೈಯದ್ ಯೂಸುಫ್( ಸೈಯದು), ಅಫ್ಜಲ್ ಪಾಷಾ,ಜಬಿವುಲ್ಲಾ, ನಯಾಜ್ ಪಾಷ, ಫಯಾಝ್ ಪಾಷ, ಜಾಬಿರ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.