ಒಮಾನ್(ವಿಶ್ವಕನ್ನಡಿಗ ನ್ಯೂಸ್): 2022 ರ ಅಕ್ಟೋಬರ್ ( ಹಿಜರಿ 1444) ವರ್ಷದ ರಬೀವುಲ್ ತಿಂಗಳಲ್ಲಿ “ಪ್ರವಾದಿ ಮುಹಮ್ಮದ್ ﷺ ಮಾನವೀಯತೆಯ ಮಹಾನಾಯಕ” ಎಂಬ ಶೀರ್ಷಿಕೆಯಲ್ಲಿ ಮೀಲಾದ್ ಕಾನ್ಫರೆನ್ಸ್ ಹಾಗೂ ಇನ್ನೂ ಹಲವಾರು ಕಾರ್ಯಕ್ರಮ ನಡೆಸಲು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯು ಎಲ್ಲಾ ಕೆಸಿಎಫ್ ರಾಷ್ಟ್ರೀಯ ಸಮಿತಿ ಗೆ ಸುತ್ತೋಲೆ ಕಳುಹಿಸಲಾಗಿದೆ.
ಈ ಪ್ರಕಾರ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅದರ ಪ್ರಚಾರ ಚಾಲನೆಯುಕ್ತ ಪೋಸ್ಟರ್ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ರವರು ಆಗಸ್ಟ್ 19 ಶುಕ್ರವಾರ ಜುಮ್ಮಾ ನಂತರ ರುವಿ (ಮಸ್ಕತ್) ನಲ್ಲಿ ಬಿಡುಗಡೆಗೊಳಿಸಿದರು.
ಕೆಸಿಎಫ್ ಒಮಾನ್ ಸಂಘಟನಾ ಅಧ್ಯಕ್ಷ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಕೊಡಗು ಇವರ ದುಅ ದೊಂದಿಗೆ ಆರಂಭ ಗೊಂಡಿತು. ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ ಇವರು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರ ರವರ ನೇತೃತ್ವದಲ್ಲಿ ನಸೀಅತ್ ಹಾಗೂ ಕೂಟ ಪ್ರಾರ್ಥನೆ ನಡೆಯಿತು. ಬಹು ಉಬೈದುಲ್ಲಾ ಸಖಾಫಿ ಮಿತ್ತೂರು ಇವರು ಮಹ್ಲರತುಲ್ ಬದ್ರಿಯ ಮಜ್ಲಿಸ್ ಗೆ ನೇತೃತ್ವ ವಹಿಸಿದ್ದರು. ಅಬ್ದುಲ್ ಖಾದರ್ ಮದನಿ ಪಲ್ಲಂಗೋಡ್ ರವರು ಪ್ರಾಸ್ತಾವಿಕ ಭಾಷಣ ಗೈದರು.
ಕಾರ್ಯಕ್ರಮ ದಲ್ಲಿ ಉಮರ್ ಸಖಾಫಿ ಎಡಪ್ಪಾಲ, ಸ ದಿಯ್ಯ ರಿಸೀವರ್ ಉಸ್ಮಾನ್ ಸಖಾಫಿ , ಕೆಸಿಎಫ್ ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ ,ಕೆಸಿಎಫ್ ಅಂತರಾಷ್ಟ್ರೀಯ ಕೌನ್ಸಿಲ್ ಸದಸ್ಯರಾದ ಇಬ್ರಾಹಿಮ್ ಹಾಜಿ ಅತ್ರಾಡಿ, ಹಂಝ ಹಾಜಿ ಕನ್ನಂಗಾರ್, ಕೆಸಿಎಫ್ ಒಮಾನ್ ಶಿಕ್ಷಣ ವಿಭಾಗದ ಅಧ್ಯಕ್ಷ ಝುಬೈರ್ ಸ ಅದಿ ಪಾಟ್ರಕೋಡಿ, ಕಾರ್ಯದರ್ಶಿ ನವಾಝ್ ಮಣಿಪುರ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು, ವಿವಿಧ ಝೋನ್ ಗಳ ನಾಯಕರು ಮತ್ತು ಸದಸ್ಯರು ಭಾಗವಹಿಸಿದರು. ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.