ಭಟ್ಕಳ (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ಆಜಾದ್ ನಗರದಿಂದ ಶನಿವಾರ ರಾತ್ರಿ ಅಪಹರಣಕ್ಕೊಳಗಾಗಿದ್ದ 8 ವರ್ಷದ ಬಾಲಕ ಗೋವಾದ ಕಲಾಂಗುಟೆ ಕಡಲತೀರದಲ್ಲಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿ ಸಿಪಿಐ ದಿವಾಕರ್ ನೇತೃತ್ವದಲ್ಲಿ ಬಾಲಕನನ್ನು ಅಪಹರಣಕಾರರಿಂದ ರಕ್ಷಿಸಿ ಭಟ್ಕಳಕ್ಕೆ ಕರೆ ತರಲಾಯಿತು. ಸಂಬಂಧಿಕರಿಬ್ಬರು ಕೃತ್ಯ ಎಸಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಭಟ್ಕಳ ತಾಲೂಕಿನ ಆಜಾದ್ ಪೇಟೆಯಲ್ಲಿ ಶನಿವಾರ ರಾತ್ರಿ ಅಲಿ ಸಾದಾ ಎಂಬ 8 ವರ್ಷದ ಬಾಲಕನನ್ನು ಅಪಹರಿಸಲಾಗಿತ್ತು. ಅಕ್ಕಪಕ್ಕದ ಮನೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಾರುತಿ ಎಕೋ ವ್ಯಾನ್ನಲ್ಲಿದ್ದ ವ್ಯಕ್ತಿಯೊಬ್ಬ ಕೆಳಗಿಳಿದು ಬಾಲಕನನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಹುಡುಕಾಟ ಆರಂಭಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.