ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಧಿಕಾರಿಗಳ ಸೂಚನೆಯಂತೆ ಮತದಾರರ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಗೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಶಿಡ್ಲಘಟ್ಟ ತಾಲೂಕು 10ನೇ ಸ್ಥಾನವನ್ನು ಹೊಂದಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ತಹಶೀಲ್ದಾರ್ ಬಿಎಸ್ ರಾಜೀವ್ ತಿಳಿಸಿದರು.
ನಗರದ ವಾರ್ಡ್ ಸಂಖ್ಯೆ 17ರ ರಹಮತ್ ನಗರದ ಗೌಸಿಯಾ ಮಸೀದಿಯ ಮುಂಬಾಗ ಚುನಾವಣಾ ಗುರುತಿನ ಚೀಟಿಗೆ ಆಧಾರ್ಲಿಂಕ್ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು ಚುನಾಯಿತ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ ಈಗಾಗಲೇ ಶೇ.52% ರಷ್ಟು ಪ್ರಗತಿ ಸಾಧಿಸಲಾಗಿದೆ ಶಿಡ್ಲಘಟ್ಟ ನಗರಸಭೆಯ ವ್ಯಾಪ್ತಿಯಲ್ಲಿ ಶೇ.25 ರಷ್ಟು ಸಾಧನೆಯನ್ನು ಮಾಡಲಾಗಿದೆ ನಾಗರಿಕರು ಸ್ವಯಂ ಪ್ರೇರಿತರಾಗಿ ಚುನಾವಣಾ ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವ ಮೂಲಕ ಸಹಕಾರ ನೀಡುತ್ತಿದ್ದಾರೆ ಎಂದು ಪ್ರಶಂಶಿಸಿದರು.
ಕ್ಷೇತ್ರದಲ್ಲಿ ಈಗಾಗಲೇ ಲಕ್ಷಕ್ಕೂ ಅಧಿಕ ಮತದಾರರ ಗುರುತಿನ ಚೀಟಿಗೆ ಯಶಸ್ವಿಯಾಗಿ ಆಧಾರ್ ಲಿಂಕ್ ಮಾಡಿಸಲಾಗಿದೆ ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಗೆ ಮತ್ತಷ್ಟು ವೇಗ ನೀಡಿ ಶೇ.100 ರಷ್ಟು ಪ್ರಗತಿ ಸಾಧಿಸಲು ಪ್ರಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದ ಅವರು ಈಗಾಗಲೇ ಆಧಾರ್ ಲಿಂಕ್ ಮಾಡುವ ಅಭಿಯಾನಕ್ಕೆ ನಾಗರೀಕರು ಸಹಕಾರ ನೀಡಿದ್ದಾರೆ ಅದೇ ರೀತಿ ಶಿಡ್ಲಘಟ್ಟ ನಗರಸಭೆಯ ವ್ಯಾಪ್ತಿಯಲ್ಲಿ ಪೌರಾಯುಕ್ತರು ಮತ್ತು ನಗರಸಭಾ ಸದಸ್ಯರು ಸಹಕಾರ ನೀಡುತ್ತಿದ್ದಾರೆ ಸಂಘ ಸಂಸ್ಥೆಗಳು ಸಹ ಈ ಅಭಿಯಾನಕ್ಕೆ ಕೈಜೋಡಿಸಿ ಮತಗಟ್ಟೆಯ ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಪ್ರಭಾರ ಆರೋಗ್ಯ ನಿರೀಕ್ಷಕ ಮುರಳಿ, ರಾಜಸ್ವ ನಿರೀಕ್ಷಕ ಅತೀಕ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಬಿಎಲ್ಒ ಗಳಾದ ಮಹಬೂಬ್ ಸಾಬ್, ಅನೀಸ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.