(www.vknews.in) : ವಿಪಕ್ಷ ನಾಯಕರಾದ ಸಿದ್ದರಾಮಯ್ಯರವರ ಕಾರಿನ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಪಕ್ಷವು ಕರೆ ನೀಡಿದ್ದ ಎಸ್.ಪಿ.ಕಚೇರಿ ಚಲೋ ಪ್ರತಿಭಟನೆಗೆ ಹೆದರಿ ರಾಜ್ಯ ಸರ್ಕಾರವು ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಿದೆ, ಇದು ಸರ್ಕಾರದ ಹೇಡಿತನದ ಕ್ರಮವೆಂದು ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಎಲ್ಲರಿಗೂ ಅವಕಾಶವಿದೆ, ರಾಜ್ಯ ಬಿ.ಜೆ.ಪಿ.ಸರ್ಕಾರವು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಕೊಡಗಿನಲ್ಲಿ ಅಸ್ತಿತ್ವವನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ಬಿ.ಜೆ.ಪಿ.ಯು ಧ್ವೇಷದ ರಾಜಕಾರಣಕ್ಕೆ ಕೈ ಹಾಕಿದೆ ಎಂದವರು ಆರೋಪಿಸಿದ್ದಾರೆ. ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆಯನ್ನು ನೀಡಲು ವಿಫಲವಾದ ಕಾರಣ ಇಷ್ಟೆಲ್ಲ ಬೆಳವಣಿಗೆಗಳು ನಡೆದಿದೆ, ಬಿ.ಜೆ.ಪಿ.ಕಾರ್ಯಕರ್ತನ ಮೂಲಕ ಮೊಟ್ಟೆ ಎಸೆಯುವ ಕೆಲಸವನ್ನು ಮಾಡಿಸಿದ್ದ ಕೊಡಗಿನ ಇಬ್ಬರು ಬಿ.ಜೆ.ಪಿ.ಶಾಸಕರುಗಳು ನಂತರ ಆತನನ್ನು ಕಾಂಗ್ರೆಸ್ಸಿಗ ಎಂದು ಬಿಂಬಿಸಲು ಹೊರಟಿದ್ದರು. ಆದರೆ ಸತ್ಯ ಬಯಲಾಗುತ್ತಿದ್ದಂತೆ ಇದೀಗ ನಿಷೇಧಾಜ್ಞೆಯ ಮೂಲಕ ಕಾಂಗ್ರೆಸ್ ಪಕ್ಷದ ಧ್ವನಿಯನ್ನು ಅಡಗಿಸಲು ಹೊರಟಿದ್ದಾರೆ. ಇವರ ಇಂತಹ ಬೆದರಿಕೆಯ ರಾಜಕಾರಣಕ್ಕೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ, ಕೂಡಲೇ ನಿಷೇಧಾಜ್ಞೆಯನ್ನು ತೆರವುಗೊಳಿಸಿ ಪ್ರತಿಭಟನೆಗೆ ಅವಕಾಶ ನೀಡಬೇಕೆಂದು ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.
ರಾಜ್ಯ ಬಿ.ಜೆ.ಪಿ. ಸರ್ಕಾರವು ಅಭಿವೃದ್ಧಿಯ ರಾಜಕಾರಣ ಮಾಡದೆ ಧರ್ಮಾಧಾರಿತವಾದ ರಾಜಕಾರಣವನ್ನು ಮಾಡುತ್ತಿದೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿ.ಜೆ.ಪಿ.ಯು ಧರ್ಮಗಳ ನಡುವೆ ಕಂದಕ ಸೃಷ್ಠಿಸಿ ಮತಗಳನ್ನು ಪಡೆಯುವ ಹುನ್ನಾರದಲ್ಲಿದೆ ಎಂದವರು ಆರೋಪಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.