ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ನಮ್ಮ ನಾಲ್ವರು ಶಾಸಕರಿಗೆ ಬಿಜೆಪಿ ತಲಾ 20 ಕೋಟಿ ರೂ. ಆಫರ್ ನೀಡಿ, ಪಕ್ಷ ಬದಲಿಸಿ ಕೇಸರಿ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಕುಮಾರ್ ಅವರನ್ನು ಭಾರತೀಯ ಜನತಾ ಪಕ್ಷದ ನಾಯಕರು ಸಂಪರ್ಕಿಸಿ, ನಾಲ್ವರು ಶಾಸಕರು ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ರೂ. ಮತ್ತು ಇತರ ಶಾಸಕರನ್ನು ತಮ್ಮೊಂದಿಗೆ ಕರೆತಂದರೆ 25 ಕೋಟಿ ರೂ.ಗಳನ್ನು ನೀಡುವ ಭರವಸೆ ನೀಡಿದೆ ಎಂದು ಸಂಜ್ ಸಿಂಗ್ ಆರೋಪಿಸಿದ್ದಾರೆ.
ಆಫರ್ ಒಪ್ಪಿಕೊಂಡು ಬಿಜೆಪಿ ಸೇರದಿದ್ದರೆ ಮನೀಶ್ ಸಿಸೋಡಿಯಾ ಅವರಂತೆ ಸಿಬಿಐ ಮತ್ತು ಇಡಿ ದಾಖಲಿಸುವ ಸುಳ್ಳು ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ ಎಎಪಿ ನಾಯಕ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.