ಉಳ್ಳಾಲ (www.vknews.in) : ಉಚ್ಚಿಲ ರಾ.ಹೆ. 66ರ ಉಚ್ಚಿಲ- ಸಂಕೊಳಿಗೆ ಎಂಬಲ್ಲಿ ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಉಚ್ಚಿಲ ಬೀಚ್ ಬಳಿಯ ಬಾಡಿಗೆ ಮನೆ ನಿವಾಸಿ ಶ್ರೀನಿವಾಸ ಆಚಾರ್ಯ(51)ಮೃತ ದುರ್ದೈವಿ. ಶ್ರೀನಿವಾಸ ಅವರು ಸಂಕೊಳಿಗೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಲಪಾಡಿ ಕಡೆಗೆ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಎದುರಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿ ನಜ್ಜು ಗುಜ್ಜಾಗಿದೆ. ಅಪಘಾತದ ರಭಸಕ್ಕೆ ಶ್ರೀನಿವಾಸ್ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಕಾರು ಮತ್ತು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಪೆಂಟರ್ ಉದ್ಯೋಗಿಯಾಗಿದ್ದ ಮೃತ ಶ್ರೀನಿವಾಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.