(www.vknews.in) ಜಿದ್ದಾ: ಇಂಡಿಯನ್ ಸೋಶಿಯಲ್ ಫೋರಂ, ಜಿದ್ದಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯು ಆಗಷ್ಟ್ 20 ರಂದು ಜಿದ್ದಾ, ಅಝೀಝಿಯಾದ ಸ್ಟಾರ್ ರೆಸ್ಟೊರೆಂಟ್ ನಲ್ಲಿವಿಜೃಂಭಣೆಯಿಂದ ನಡೆಯಿತು.
ಇಂಡಿಯನ್ ಸೋಶಿಯಲ್ ಫೋರಂ, ಕರ್ನಾಟಕ ರಾಜ್ಯಾಧ್ಯಕ್ಷರಾದ ಆಸಿಫ್ ಗಂಜಿಮಠ ಸಭಾಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ಸೋಶಿಯಲ್ ಫೋರಂ, ಜಿದ್ದಾ ಕೇಂದ್ರ ಸಮಿತಿ ಸದಸ್ಯರಾದ ಅಬ್ದುಲ್ ನಾಸಿರ್ ಬಿ.ಸಿ.ರೋಡ್ ಪ್ರಾಸ್ತಾವಿಕ ಮಾತನಾಡಿದರು. ಇಂಡಿಯನ್ ಸೋಶಿಯಲ್ ಫೋರಂ, ಸೌದಿ ಅರೇಬಿಯಾ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ಘನಿಯವರು ಸ್ವಾತಂತ್ರ್ಯ ಭಾರತ ಮತ್ತು ಪ್ರಸಕ್ತ ಭಾರತದ ಪರಿಸ್ಥಿತಿಯನ್ನು ಮನಮುಟ್ಟುವಂತೆ ವಿವರಿಸುತ್ತಾ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ಜಮೀಯತುಲ್ ಫಲಾಹ್ ಮಾಜಿ ಅಧ್ಯಕ್ಷರು ಮತ್ತು ಸಮಾಜ ಸೇವಕರೂ ಆದ ಮಹಮ್ಮದ್ ಇಕ್ಬಾಲ್, ಇಂಡಿಯನ್ ಸೋಶಿಯಲ್ ಫೋರಂ ಜಿದ್ದಾ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಮುಜಾಹಿದ್ ಪಾಶ ಮತ್ತು ಇಂಡಿಯಾ ಫ್ರೆಟರ್ನಿಟಿ ಫೋರಂ, ಜಿದ್ದಾ ಜಿಲ್ಲಾ ಸಮಿತಿ ಅಧ್ಯಕ್ಷರಾದ ಆರಿಫ್ ಬಜ್ಪೆ ಉಪಸ್ಥಿತರಿದ್ದರು.
ಪೈಝಲ್ ಪರ್ಲಿಯಾ ಕಾರ್ಯಕ್ರಮ ನಿರೂಪಿಸಿದರು. ಇನಾಯತ್ ಬೆಂಗಳೂರು ಧನ್ಯವಾದವಿತ್ತರು. ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.