(www.vknews.in) ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆರಿಯಪರಂಬು ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಂದಾಗಿ ಶಾಲಾ ವಿದ್ಯಾರ್ಥಿಗಳು ಮದರಸ ವಿದ್ಯಾರ್ಥಿಗಳು ಸಾರ್ವಜನಿಕರು ತೊಂದರೆ ಗೀಡಾಗುತ್ತಿದ್ದೂ, ಬಸ್ ವ್ಯವಸ್ಥೆ ಇಲ್ಲದ ಈ ಬಾಗದಲ್ಲಿ ಶಾಲಾ ಕಾಲೇಜು ಮದರಸ ವಿದ್ಯಾರ್ಥಿಗಳು ಒಂಟಿಯಾಗಿ ಹೋದರೆ ಯಾವುದೇ ಸಂದರ್ಭದಲ್ಲಿ ದಾಳಿ ಮಾಡುವ ಸಾಧ್ಯತೆಯಿದೆ, ರಾತ್ರಿ ವೇಳೆಯಲ್ಲಿ ಮದರಸ ಇರುವುದರಿಂದ ವಿದ್ಯಾರ್ಥಿಗಳೊಂದಿಗೆ ಪೋಷಕರು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಮಾತ್ರವಲ್ಲ ಬೀದಿ ನಾಯಿಗಳ ದಾಳಿಗೆ ಕುರಿ ಕೋಳಿಗಳು ಬಲಿಯಾಗುತ್ತಿದ್ದು ನಾಪೋಕ್ಲು ಪಟ್ಟಣದ ಸಂತೆ ಮಾರುಕಟ್ಟೆ ಮುಂತಾದ ಕಡೆಗಳಲ್ಲಿ ಬೀದಿನಾಯಿಗಳು ಹೆಚ್ಚಾಗಿ ಕಂಡುಬರುತ್ತಿದೆ, ಮುಂಜಾಗ್ರತಾ ಕ್ರಮವಾಗಿ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ತರಾದ ಪರವಂಡ ಸಿರಾಜ್ ಆಗ್ರಹಿಸಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.