ಬೆಳ್ತಂಗಡಿ (www.vknews.in) : ಬೆಳ್ತಂಗಡಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ವಿಫಲರಾಗಿರುವ ಶಾಸಕ ಹರೀಶ್ ಪೂಂಜಾ ಚುನಾವಣೆ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಧರ್ಮಸ್ಥಳದ ಸಮೀಪ 100 ಎಕರೆ ಭೂಮಿ ವಶಪಡಿಸಿಕೊಂಡು ಲಘು ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿದ್ದು ಇದಕ್ಕಾಗಿ ಇಲ್ಲಿನ ಬಡವರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾದರೆ ಯಾವ ಕಾರಣಕ್ಕೂ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳ್ತಂಗಡಿಯಲ್ಲಿ ನಿರ್ಮಿಸಲು ಮುಂದಾಗಿರುವ ಸುಮಾರು 12 ಸೀಟುಗಳ ಲಘು ವಿಮಾನ ಇಳಿಯುವ ಸಾಮರ್ಥ್ಯದ ವಿಮಾನ ನಿಲ್ದಾಣದಿಂದ ಇಲ್ಲಿನ ಶ್ರೀಮಂತರಿಗೆ ಮತ್ತು ಧಾರ್ಮಿಕ ಕ್ಷೇತ್ರದ ಮುಖಂಡರುಗಳಿಗೆ ಮಾತ್ರ ಲಾಭವಾಗಲಿದೆ. ಬಡವರ 100 ಎಕರೆ ಭೂಮಿ ವಶ ಪಡಿಸಿ ಸರ್ಕಾರದ 100 ಕೋಟಿ ವ್ಯಯಿಸಿ ಕೆಲವು ಪ್ರಭಾವಿಗಳ ಅನುಕೂಲಕ್ಕಾಗಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿರುವ ಶಾಸಕರ ಕ್ರಮದ ಹಿಂದೆ ಪ್ರಭಾವಿಗಳ ಓಲೈಕೆ ಮನಸ್ಥಿತಿ ಎದ್ದು ಕಾಣುತ್ತಿದೆ. ವಿಮಾನ ನಿಲ್ದಾಣದ ಹೆಸರಿನಲ್ಲಿ ಬಡವರ ಕೃಷಿ ಭೂಮಿ ಕಬಳಿಕೆಗೆ ಮುಂದಾದರೆ, ಎಸ್ಡಿಪಿಐ ಹೋರಾಟ ನಡೆಸಲಿದೆ ಎಂದೂ ನಿಸಾರ್ ಕುದ್ರಡ್ಕ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.