ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ತನ್ನ 17 ವರ್ಷದ ಮಗಳ ಮೇಲೆ ನಡೆದ ಅತ್ಯಾಚಾರದ ಬಗ್ಗೆ ತ್ವರಿತ ತನಿಖೆ ನಡೆಸುವಂತೆ ಕೋರಿ ಪೊಲೀಸ್ ಠಾಣೆಗೆ ಬಂದಿದ್ದ ತಾಯಿಗೆ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ಮೌರ್ಯ ಅವರನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಬಾಲಕಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಅನೂಪ್ ಮೌರ್ಯ ಮುನ್ನಡೆಸುತ್ತಿದ್ದರು. ಸ್ಟೇಷನ್ ತಲುಪಿದ ಬಾಲಕಿಯ ತಾಯಿಗೆ ಅನೂಪ್ ತನ್ನ ಕ್ವಾರ್ಟರ್ಸ್ ಬಳಿಯ ಪೆಟ್ರೋಲ್ ಪಂಪ್ ಬಳಿ ಬರುವಂತೆ ಹೇಳಿದನು. ನಂತರ ದೂರಿಗೆ ಸಹಿ ಹಾಕುವ ನೆಪದಲ್ಲಿ ಅವರನ್ನು ಕ್ವಾರ್ಟರ್ಸ್ ಗೆ ಕರೆದೊಯ್ದು ಅತ್ಯಾಚಾರ ಎಸಗಲಾಯಿತು.
ಮಹಿಳೆ ಎಸ್ಪಿಗೆ ದೂರು ನೀಡಿದ ನಂತರ, ತನಿಖೆ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದಾದ ಬಳಿಕ ಅನೂಪ್ ಮೌರ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.