(www.vknews.in) : ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧ ಬೇಕಲದ ಕ್ವಾಟರ್ಸ್ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಬಂಧಿಸಲಾಗಿದೆ. ಗುಜರಿ ಹೆಕ್ಕುವ ವೃತ್ತಿಯಲ್ಲಿರುವ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆ. 21ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು. ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು, ಬೀಮ್ ಪತ್ತೆಯಾಗಿತ್ತು. ರೈಲ್ವೆ ಗಾರ್ಡ್ಗಳ ಸಮಯಪ್ರಜ್ಞೆಯಿಂದ ಸಂಭಾವ್ಯ ದುರಂತ ತಪ್ಪಿ ಹೋಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.