ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಸಮಾಜದಲ್ಲಿ ದಾನ ಧರ್ಮ ಮಾಡುವ ಜೊತೆಗೆ ಧಾರ್ಮಿಕ ಸೇವಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಪ್ರಾಪ್ತವಾಗುತ್ತದೆ ಎಂದು ಬಂಗಾರದ ಮನುಷ್ಯ ಎಂದು ಖ್ಯಾತಿ ಹೊಂದಿರುವ ಸಮಾಜಸೇವಕ ಲಕ್ಷ್ಮೀನಾರಾಯಣಪ್ಪ ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಎರಡನೇ ದೇವಸ್ಥಾನ ಎಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ತಾಲೂಕಿನ ಕಡಿಶೀಗನಹಳ್ಳಿ ಗ್ರಾಮದ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ದೇವಾಲಯವನ್ನು ಅತ್ಯುತ್ತಮವಾಗಿ ನಿರ್ಮಿಸಲಾಗಿದೆ ಈ ದೇವಾಲಯದ ಅಭಿವೃಧ್ಧಿಗಾಗಿ ತನು-ಮನ-ಧನ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಘೋಷಣೆ ಮಾಡಿ ಅತ್ಯುತ್ತಮವಾಗಿ ದೇವಸ್ಥಾನ ಅಭಿವೃದ್ಧಿ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇವಾಲಯ ಸಮಿತಿಯ ಮುಖ್ಯಸ್ಥ ಕೆ.ಎಂ. ಮುನೇಗೌಡ ಅವರು ಲಕ್ಷ್ಮೀನಾರಾಯಣಪ್ಪ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.