ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ದಾಳಿ ಮುಂದುವರಿದಿದ್ದು, ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ತಂಡ ದಾಳಿ ಮಾಡಿದೆ.
ಕಳೆದ ಮಂಗಳವಾರ ಎನ್ಐಎ ತಂಡ ಸುಳ್ಯ, ಪುತ್ತೂರು ಸೇರಿದಂತೆ 30 ಕಡೆ ದಾಳಿ ನಡೆಸಿತ್ತು. ಇದರ ಮುಂದುವರಿದ ಭಾಗವಾಗಿ ಇಂದು ಬೆಳಿಗ್ಗೆ ಎಸ್ಡಿಪಿಐ ರಾಷ್ಟ್ರೀಯ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್ಐಎ ದಾಳಿ ನಡೆಸಿದೆ. ಎನ್.ಐ.ಎಯನ್ನು ದುರ್ಬಳಕೆ ಮಾಡಿ ಸಂಘಟನೆಯ ನಾಯಕರನ್ನು ಗುರಿಪಡಿಸುತ್ತಿರುವ ಬಿಜೆಪಿ ಸರ್ಕಾರದ ಹಗೆತನದ ಕ್ರಮವನ್ನ ವಿರೋಧಿಸಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.