(www.vknews.in)
ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸಂಗಮ್ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿದ ಘಟನೆ ವರದಿಯಾಗಿದೆ.
ಗುರುವಾರ ಮಧ್ಯಾಹ್ನದ ವೇಳೆ ಅಪರಿಚಿತ ಯುವಕ ಸೇತುವೆ ಮೇಲಿನಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾನೆ ಎನ್ನಲಾಗಿದೆ.
ಸೇತುವೆ ಮೇಲೆ ಯುವಕನ ಮೊಬೈಲ್ ಫೋನ್ ಪತ್ತೆಯಾಗಿದ್ದು, ನದಿಗೆ ಹಾರಿದ ಯುವಕನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.