ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಕೋಡಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಅಮ್ಟೂರ್ ಶರೀಫ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಶರೀಫ್ ಅವರು ಮರದ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಸಹೋದರರು, ಪತ್ನಿ ಹಾಗೂ 8 ತಿಂಗಳ ಮಗು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.